ತರಗತಿಯಲ್ಲಿ ಕುಳಿತು ಮಾತನಾಡುತ್ತಿದ್ದಾಗ ಕೈ ಹಿಡಿದು ಎಬ್ಬಿಸಿದ ಶಿಕ್ಷಕಿ ಮುಂದೆ ನಿಂತು ಮಾತನಾಡುವಂತೆ ಹೇಳಿದ್ದಾರೆ. ಕುಳಿತು ಮಾತನಾಡಿದರೆ ಕೇಳೋದಿಲ್ಲ, ನಿಂತು ಮಾತನಾಡು ಅಂದಿದ್ದಾರೆ. ಅದಕ್ಕಾಗಿ ಪ್ರತಿಭಾ ಕಾರಂಜಿಯ ಭಾಷಣದಲ್ಲಿ ಮಾತನಾಡುತ್ತಿದ್ದೇನೆ. ಶಾಲೆಯಲ್ಲಿ ಚಿಕ್ಕಿ ತಿಂದೆ ಎಂದು ಶಾಲೆಯಲ್ಲಿ ನೀಡುವ ಬಾಳೆಹಣ್ಣನ್ನೇ ನೀಡಲಿಲ್ಲ. ಕುರಿಮರಿ ಯಾರದ್ದೆಂದು ಪ್ರಶ್ನಿಸಿದ ಶಿಕ್ಷಕಿಗೇ ಕುರಿಯದ್ದೇ ಮರಿ ಅಂದಾಗ ಕಣ್ಣು ದೊಡ್ಡದಾಗಿ ನೋಡಿದ ಸನ್ನಿವೇಶ, ಎಲ್ಲ ವಿಚಾರಗಳನ್ನು ಹಾಸ್ಯಭರಿತವಾಗಿ ಹೇಳಿದ್ದಾನೆ. ಅಫ್ವಾನ್ ಮಾತಿಗೆ ಇಡೀ ಸಭೆ ನಗೆಗಡಲಲ್ಲಿ ತೇಲಿತ್ತು. ಈತನ ಮಾತುಗಳನ್ನು ಶಿಕ್ಷಕಿಯೊಬ್ಬರು ಮೊಬೈಲ್ ಮೂಲಕ ಚಿತ್ರೀಕರಿಸಿದ್ದರು.