‘ಮುಜರಾಯಿ ಖಾತೆ ಸಚಿವನಾಗಿ ಎರಡು ಬಾರಿ ಕಾರ್ಯನಿರ್ವಹಿಸಿದ್ದು, ಮುಜರಾಯಿ ಖಾತೆಯಲ್ಲಿ ಉತ್ತಮ ಕೆಲಸ ಮಾಡಿದ ತೃಪ್ತಿ ಇದೆ. ಹೊಸ ಸರ್ಕಾರದಲ್ಲಿ ಖಾತೆ ಬದಲಾಗಿದೆ. ಶಶಿಕಲಾ ಜೊಲ್ಲೆ ಅವರಿಗೆ ಈ ಖಾತೆ ನೀಡಲಾಗಿದ್ದು, ಅಗತ್ಯ ಸಲಹೆ, ಸೂಚನೆಗಳನ್ನು ಅವರಿಗೆ ನೀಡುತ್ತೇನೆ’ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.