ಉಪ್ಪಿನಂಗಡಿ: ‘ರಂಜಾನ್ ತಿಂಗಳ ಉಪವಾಸ ವ್ರತ ಅಂತ್ಯದೊಂದಿಗೆ ಆತ್ಮ ಶುದ್ಧೀಕರಣ ಮತ್ತು ಪರಸ್ಪರ ಸಹೋದರತೆ, ಶಾಂತಿ, ಐಕ್ಯತೆಯ ಪ್ರತೀಕದ ಸಂದೇಶದೊಂದಿಗೆ ಆಚರಿಸುವ ಮುಸ್ಲಿಮರ ಪವಿತ್ರ ಈದ್-ಉಲ್-ಫಿತ್ರ್ ಹಬ್ಬವನ್ನು ಗಂಡಿಬಾಗಿಲು ಪರಿಸರದ ಮಂದಿ ಸಡಗರ ಸಂಭ್ರಮದೊಂದಿಗೆ ಶನಿವಾರ ಆಚರಿಸಿದರು.
ಗಂಡಿಬಾಗಿಲು ಜುಮಾ ಮಸೀದಿಯಲ್ಲಿ ಖತೀಬ್ ಅಬ್ದುಲ್ ಹಮೀದ್ ಶೌಕತ್ ಆಲಿ ಫೈಝಿ ಖುತುಬಾ ಪಾರಾಯಣ, ವಿಶೇಷ ನಮಾಜು ಮತ್ತು ಪ್ರಾರ್ಥನೆ ನೆರವೇರಿಸಿದರು. ಹಬ್ಬದ ಸಂದೇಶ ನೀಡಿದ ಅವರು, ’ರಂಜಾನ್ ತಿಂಗಳಲ್ಲಲಿ ಮಾಡಿರುವ ಪ್ರಾರ್ಥನೆ, ವರ್ಷಪೂರ್ತಿ ಪ್ರೇರಣೆ ಆಗಲಿ, ಶಾಂತಿ, ಸೌಹಾರ್ದತೆ, ಐಕ್ಯತೆ ಎಲ್ಲೆಡೆ ನೆಲೆಗೊಳ್ಳಲಿ’ ಎಂದರು.