<p><strong>ವಿಟ್ಲ: ಈ</strong>ದ್ ಕಮಿಟಿ ವಿಟ್ಲ ವತಿಯಿಂದ ವಿಟ್ಲ ಲಯನ್ಸ್ ಕ್ಲಬ್, ಲಿಯೋ ಕ್ಲಬ್ ಮತ್ತು ರೋಟರಿ ಕ್ಲಬ್ ಸಹಯೋಗದಲ್ಲಿ ಮೆಹ್ ಫಿಲೇ ಈದ್ 2023 ಕಾರ್ಯಕ್ರಮ ಒಕ್ಕೆತ್ತೂರು ಸಿಂಹಗಿರಿ ಲಯನ್ಸ್ ಸೇವಾ ಭವನದಲ್ಲಿ ನಡೆಯಿತು.</p>.<p>ಮಂಗಳೂರು ಶಾಂತಿ ಪ್ರಕಾಶನದ ವ್ಯವಸ್ಥಾಪಕ ಮಹಮ್ಮದ್ ಕುಂಞಿ ಈದ್ ಸಂದೇಶ ನೀಡಿ, ನಮ್ಮ ಮಾನಸಿಕತೆಯನ್ನು ಬದಲಾಯಿಸಿಕೊಂಡಾಗ ಉತ್ತಮ ಸಮಾಜ ನಿರ್ಮಾಣವಾಗುತ್ತದೆ. ಅಧರ್ಮ, ಅಕ್ರಮವನ್ನು ಪ್ರವಾದಿ ವಿರೋಧಿಸಿದ್ದಾರೆ. ಧರ್ಮವನ್ನು ಅರಿತು ಬಾಳಿದರೆ ಸಮಾಜದಲ್ಲಿ ಸಮಸ್ಯೆಗಳು ಬರುವುದಿಲ್ಲ ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ಬಂಟ್ವಾಳ ಜಮೀಯತ್ ಫಲಾಹ್ ಅಧ್ಯಕ್ಷ ರಶೀದ್ ವಿಟ್ಲ ಮಾತನಾಡಿ, ವೆನ್ಲಾಕ್ ಆಸ್ಪತ್ರೆಯಲ್ಲಿ ನಿರಂತರವಾಗಿ ರೋಗಿಗಳ ಸೇವೆ ಮಾಡಲಾಗುತ್ತಿದೆ. ಯಾವುದೇ ಜಾತಿ, ಧರ್ಮ ನೋಡದೆ ಸೇವೆ ಮಾಡಲಾಗುತ್ತಿದೆ ಎಂದರು.</p>.<p>ಡಾ.ಗೀತಪ್ರಕಾಶ್, ವಕೀಲ ಜಯರಾಮ ರೈ, ಹನೀಫ್ ಹಾಜಿ ಗೋಳ್ತಮಜಲು ಮಾತನಾಡಿದರು. ಯೂಸುಫ್ ಮೇಗಿನಪೇಟೆ, ಇಕ್ಬಾಲ್ ಅವರನ್ನು ಸನ್ಮಾನಿಸಲಾಯಿತು.</p>.<p>ಈದ್ ಕಮಿಟಿ ಸಂಚಾಲಕ ಅಝೀಜ್ ಸನ, ಲಯನ್ಸ್ ಕ್ಲಬ್ ಅಧ್ಯಕ್ಷೆ ಜಲಜಾಕ್ಷಿ ಬಿ.ಗೌಡ, ರೋಟರಿ ಕ್ಲಬ್ ಅಧ್ಯಕ್ಷ ಕಿರಣ್ ಕುಮಾರ್ ಬ್ರಹ್ಮಾವರ, ಲಿಯೋ ಅಧ್ಯಕ್ಷ ಸಹಲನ್ ಉಪಸ್ಥಿತರಿದ್ದರು.</p>.<p>ಮಹಮ್ಮದ್ ಇಕ್ಬಾಲ್ ಹಾನೆಸ್ಟ್ ಸ್ವಾಗತಿಸಿದರು. ಅಬೂಬಕ್ಕರ್ ವಿಟ್ಲ ವಂದಿಸಿದರು. ಶಾಕೀರ್ ಅಳಕೆಮಜಲು ನಿರೂಪಿಸಿದರು. ಕಲಂದರ್ ಪರ್ತಿಪ್ಪಾಡಿ ಸಹಕರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಟ್ಲ: ಈ</strong>ದ್ ಕಮಿಟಿ ವಿಟ್ಲ ವತಿಯಿಂದ ವಿಟ್ಲ ಲಯನ್ಸ್ ಕ್ಲಬ್, ಲಿಯೋ ಕ್ಲಬ್ ಮತ್ತು ರೋಟರಿ ಕ್ಲಬ್ ಸಹಯೋಗದಲ್ಲಿ ಮೆಹ್ ಫಿಲೇ ಈದ್ 2023 ಕಾರ್ಯಕ್ರಮ ಒಕ್ಕೆತ್ತೂರು ಸಿಂಹಗಿರಿ ಲಯನ್ಸ್ ಸೇವಾ ಭವನದಲ್ಲಿ ನಡೆಯಿತು.</p>.<p>ಮಂಗಳೂರು ಶಾಂತಿ ಪ್ರಕಾಶನದ ವ್ಯವಸ್ಥಾಪಕ ಮಹಮ್ಮದ್ ಕುಂಞಿ ಈದ್ ಸಂದೇಶ ನೀಡಿ, ನಮ್ಮ ಮಾನಸಿಕತೆಯನ್ನು ಬದಲಾಯಿಸಿಕೊಂಡಾಗ ಉತ್ತಮ ಸಮಾಜ ನಿರ್ಮಾಣವಾಗುತ್ತದೆ. ಅಧರ್ಮ, ಅಕ್ರಮವನ್ನು ಪ್ರವಾದಿ ವಿರೋಧಿಸಿದ್ದಾರೆ. ಧರ್ಮವನ್ನು ಅರಿತು ಬಾಳಿದರೆ ಸಮಾಜದಲ್ಲಿ ಸಮಸ್ಯೆಗಳು ಬರುವುದಿಲ್ಲ ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ಬಂಟ್ವಾಳ ಜಮೀಯತ್ ಫಲಾಹ್ ಅಧ್ಯಕ್ಷ ರಶೀದ್ ವಿಟ್ಲ ಮಾತನಾಡಿ, ವೆನ್ಲಾಕ್ ಆಸ್ಪತ್ರೆಯಲ್ಲಿ ನಿರಂತರವಾಗಿ ರೋಗಿಗಳ ಸೇವೆ ಮಾಡಲಾಗುತ್ತಿದೆ. ಯಾವುದೇ ಜಾತಿ, ಧರ್ಮ ನೋಡದೆ ಸೇವೆ ಮಾಡಲಾಗುತ್ತಿದೆ ಎಂದರು.</p>.<p>ಡಾ.ಗೀತಪ್ರಕಾಶ್, ವಕೀಲ ಜಯರಾಮ ರೈ, ಹನೀಫ್ ಹಾಜಿ ಗೋಳ್ತಮಜಲು ಮಾತನಾಡಿದರು. ಯೂಸುಫ್ ಮೇಗಿನಪೇಟೆ, ಇಕ್ಬಾಲ್ ಅವರನ್ನು ಸನ್ಮಾನಿಸಲಾಯಿತು.</p>.<p>ಈದ್ ಕಮಿಟಿ ಸಂಚಾಲಕ ಅಝೀಜ್ ಸನ, ಲಯನ್ಸ್ ಕ್ಲಬ್ ಅಧ್ಯಕ್ಷೆ ಜಲಜಾಕ್ಷಿ ಬಿ.ಗೌಡ, ರೋಟರಿ ಕ್ಲಬ್ ಅಧ್ಯಕ್ಷ ಕಿರಣ್ ಕುಮಾರ್ ಬ್ರಹ್ಮಾವರ, ಲಿಯೋ ಅಧ್ಯಕ್ಷ ಸಹಲನ್ ಉಪಸ್ಥಿತರಿದ್ದರು.</p>.<p>ಮಹಮ್ಮದ್ ಇಕ್ಬಾಲ್ ಹಾನೆಸ್ಟ್ ಸ್ವಾಗತಿಸಿದರು. ಅಬೂಬಕ್ಕರ್ ವಿಟ್ಲ ವಂದಿಸಿದರು. ಶಾಕೀರ್ ಅಳಕೆಮಜಲು ನಿರೂಪಿಸಿದರು. ಕಲಂದರ್ ಪರ್ತಿಪ್ಪಾಡಿ ಸಹಕರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>