<p><strong>ಸುಳ್ಯ (ದಕ್ಷಿಣ ಕನ್ನಡ):</strong> ರಬ್ಬರ್ ಟ್ಯಾಪಿಂಗ್ ಮಾಡುತ್ತಿದ್ದ ವೃದ್ಧೆ ಮೇಲೆ ಕಾಡಾನೆ ಮಂಗಳವಾರ ಬೆಳಿಗ್ಗೆ ದಾಳಿ ಮಾಡಿದ್ದು, ಆಕೆ ಮೃತಪಟ್ಟಿದ್ದಾರೆ.</p><p>ಪುತ್ತೂರು ತಾಲ್ಲೂಕಿನ ಮಾಡಾವು ಕೆಯ್ಯೂರು ಗ್ರಾಮದ ಸೆಲ್ಲಮ್ಮ (65) ಮೃತ ಮಹಿಳೆ. ಈ ಕುರಿತು ಆಕೆಯ ಪುತ್ರ ಟಿ.ಯೋಗರಾಜ ಅವರು ದೂರು ನೀಡಿದ್ದು, ಬೆಳ್ಳಾರೆ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. </p><p>ಸೆಲ್ಲಮ್ಮ ಅವರು ಕೊಳ್ತಿಗೆ ಗ್ರಾಮದ ಕನಿಯಾರು ಸಿಆರ್ಸಿ ಕಾಲೋನಿಯಲ್ಲಿ ಒಬ್ಬರೇ ವಾಸವಾಗಿದ್ದರು. ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ (ಕೆಎಫ್ಡಿಸಿ) ರಬ್ಬರ್ ತೋಟದಲ್ಲಿ ರಬ್ಬರ್ ಟ್ಯಾಪಿಂಗ್ ಕೆಲಸಕ್ಕೆ ಹೋಗುತ್ತಿದ್ದರು. ಮಂಗಳವಾರ ಬೆಳಿಗ್ಗೆ 7 ರಿಂದ 8 ಗಂಟೆಯ ಅವಧಿಯಲ್ಲಿ ಕೊಳ್ತಿಗೆ ಗ್ರಾಮದ ಹರ್ತ್ಯಡ್ಕ ಎಂಬಲ್ಲಿ ರಬ್ಬರ್ ಟ್ಯಾಪಿಂಗ್ ಮಾಡುತ್ತಿದ್ದಾಗ ಕಾಡಾನೆಯೊಂದು ದಾಳಿ ನಡೆಸಿತ್ತು. ಮಹಿಳೆಯನ್ನು ಓಡಿಸಿಕೊಂಡು ಹೋಗಿ ತುಳಿದು ಗಂಭೀರವಾಗಿ ಗಾಯಗೊಳಿಸಿತ್ತು. ಸೆಲ್ಲಮ್ಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದರು’ ಎಂದು ಪೊಲೀಸ್ ಮೂಲಗಳು ತಿಳಿಸಿವೆ. </p><p>ಘಟನಾ ಸ್ಥಳಕ್ಕೆ ಅರಣ್ಯಾಧಿಕಾರಿಗಳು, ಕೆಎಫ್ಡಿಸಿ ಅಧಿಕಾರಿಗಳು, ಸುಳ್ಯ ಸರ್ಕಲ್ ಇನ್ಸ್ಪೆಕ್ಟರ್ ಹಾಗೂ ಬೆಳ್ಳಾರೆ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುಳ್ಯ (ದಕ್ಷಿಣ ಕನ್ನಡ):</strong> ರಬ್ಬರ್ ಟ್ಯಾಪಿಂಗ್ ಮಾಡುತ್ತಿದ್ದ ವೃದ್ಧೆ ಮೇಲೆ ಕಾಡಾನೆ ಮಂಗಳವಾರ ಬೆಳಿಗ್ಗೆ ದಾಳಿ ಮಾಡಿದ್ದು, ಆಕೆ ಮೃತಪಟ್ಟಿದ್ದಾರೆ.</p><p>ಪುತ್ತೂರು ತಾಲ್ಲೂಕಿನ ಮಾಡಾವು ಕೆಯ್ಯೂರು ಗ್ರಾಮದ ಸೆಲ್ಲಮ್ಮ (65) ಮೃತ ಮಹಿಳೆ. ಈ ಕುರಿತು ಆಕೆಯ ಪುತ್ರ ಟಿ.ಯೋಗರಾಜ ಅವರು ದೂರು ನೀಡಿದ್ದು, ಬೆಳ್ಳಾರೆ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. </p><p>ಸೆಲ್ಲಮ್ಮ ಅವರು ಕೊಳ್ತಿಗೆ ಗ್ರಾಮದ ಕನಿಯಾರು ಸಿಆರ್ಸಿ ಕಾಲೋನಿಯಲ್ಲಿ ಒಬ್ಬರೇ ವಾಸವಾಗಿದ್ದರು. ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ (ಕೆಎಫ್ಡಿಸಿ) ರಬ್ಬರ್ ತೋಟದಲ್ಲಿ ರಬ್ಬರ್ ಟ್ಯಾಪಿಂಗ್ ಕೆಲಸಕ್ಕೆ ಹೋಗುತ್ತಿದ್ದರು. ಮಂಗಳವಾರ ಬೆಳಿಗ್ಗೆ 7 ರಿಂದ 8 ಗಂಟೆಯ ಅವಧಿಯಲ್ಲಿ ಕೊಳ್ತಿಗೆ ಗ್ರಾಮದ ಹರ್ತ್ಯಡ್ಕ ಎಂಬಲ್ಲಿ ರಬ್ಬರ್ ಟ್ಯಾಪಿಂಗ್ ಮಾಡುತ್ತಿದ್ದಾಗ ಕಾಡಾನೆಯೊಂದು ದಾಳಿ ನಡೆಸಿತ್ತು. ಮಹಿಳೆಯನ್ನು ಓಡಿಸಿಕೊಂಡು ಹೋಗಿ ತುಳಿದು ಗಂಭೀರವಾಗಿ ಗಾಯಗೊಳಿಸಿತ್ತು. ಸೆಲ್ಲಮ್ಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದರು’ ಎಂದು ಪೊಲೀಸ್ ಮೂಲಗಳು ತಿಳಿಸಿವೆ. </p><p>ಘಟನಾ ಸ್ಥಳಕ್ಕೆ ಅರಣ್ಯಾಧಿಕಾರಿಗಳು, ಕೆಎಫ್ಡಿಸಿ ಅಧಿಕಾರಿಗಳು, ಸುಳ್ಯ ಸರ್ಕಲ್ ಇನ್ಸ್ಪೆಕ್ಟರ್ ಹಾಗೂ ಬೆಳ್ಳಾರೆ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>