<p><strong>ಪುತ್ತೂರು</strong>: ತಾಲ್ಲೂಕಿನ ಕೆದಂಬಾಡಿ ಗ್ರಾಮದ 2ನೇ ವಾರ್ಡ್ನಲ್ಲಿ ಬಹುತೇಕ ಕೂಲಿ ಕಾರ್ಮಿಕರೇ ವಾಸ್ತವ್ಯವಿರುವ ಸನ್ಯಾಸಿಗುಡ್ಡೆ ಜನತಾ ಕಾಲೊನಿಗೆ ಸರ್ಕಾರದ ಯಾವುದೇ ಸವಲತ್ತು ತಲುಪಿಲ್ಲ ಎಂದು ಆರೋಪಿಸಿರುವ ಅಲ್ಲಿನ ಮತದಾರರು, ಚುನಾಯಿತ ಜನಪ್ರತಿನಿಧಿಗಳ ನಿರ್ಲಕ್ಷ್ಯ ಧೋರಣೆಯಿಂದ ಬೇಸರಗೊಂಡು ಚುನಾವಣಾ ಬಹಿಷ್ಕಾರದ ನಿರ್ಧಾರ ಕೈಗೊಂಡಿದ್ದು, ಈ ಬಗ್ಗೆ ಬ್ಯಾನರ್ ಅಳವಡಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>ನಮ್ಮ ಬಹುಕಾಲದ ಬೇಡಿಕೆಯಾಗಿದ್ದ ರಸ್ತೆ, ತಡೆಗೋಡೆ, ಬೀದಿ ದೀಪ, ಒಳಚರಂಡಿ ಸಮಸ್ಯೆಗಳಿಗೆ ಸ್ಪಂದಿಸದೆ ಹುಸಿ ಭರವಸೆ ಮಾತ್ರ ನೀಡುತ್ತಿರುವ ವಾರ್ಡ್ನ ಪಂಚಾಯಿತಿ ಸದಸ್ಯರಿಂದ ಶಾಸಕರವರೆಗಿನ ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದ ಬೇಸರಗೊಂಡಿದ್ದೇವೆ. ಮುಂದಿನ ಪಂಚಾಯಿತಿ ಚುನಾವಣೆಯನ್ನು ನಾವು ಬಹಿಷ್ಕರಿಸುತ್ತಿದ್ದೇವೆ ಎಂದು ಬ್ಯಾನರ್ನಲ್ಲಿ ಉಲ್ಲೇಖಿಸಿದ್ದಾರೆ.</p>.<p>ತಡೆಗೋಡೆ ನಿರ್ಮಿಸಿ ರಸ್ತೆ ಪುನರ್ ನಿರ್ಮಿಸುವಂತೆ ಎರಡು ವರ್ಷಗಳಿಂದ ಪಂಚಾಯಿತಿ, ತಹಶೀಲ್ದಾರ್ ಕಚೇರಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಅರ್ಜಿ ಸಲ್ಲಿಸಿದ್ದರೂ ಸ್ಪಂದನೆ ಸಿಕ್ಕಿಲ್ಲ ಎಂದು ನಿವಾಸಿಗಳು ದೂರಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪುತ್ತೂರು</strong>: ತಾಲ್ಲೂಕಿನ ಕೆದಂಬಾಡಿ ಗ್ರಾಮದ 2ನೇ ವಾರ್ಡ್ನಲ್ಲಿ ಬಹುತೇಕ ಕೂಲಿ ಕಾರ್ಮಿಕರೇ ವಾಸ್ತವ್ಯವಿರುವ ಸನ್ಯಾಸಿಗುಡ್ಡೆ ಜನತಾ ಕಾಲೊನಿಗೆ ಸರ್ಕಾರದ ಯಾವುದೇ ಸವಲತ್ತು ತಲುಪಿಲ್ಲ ಎಂದು ಆರೋಪಿಸಿರುವ ಅಲ್ಲಿನ ಮತದಾರರು, ಚುನಾಯಿತ ಜನಪ್ರತಿನಿಧಿಗಳ ನಿರ್ಲಕ್ಷ್ಯ ಧೋರಣೆಯಿಂದ ಬೇಸರಗೊಂಡು ಚುನಾವಣಾ ಬಹಿಷ್ಕಾರದ ನಿರ್ಧಾರ ಕೈಗೊಂಡಿದ್ದು, ಈ ಬಗ್ಗೆ ಬ್ಯಾನರ್ ಅಳವಡಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>ನಮ್ಮ ಬಹುಕಾಲದ ಬೇಡಿಕೆಯಾಗಿದ್ದ ರಸ್ತೆ, ತಡೆಗೋಡೆ, ಬೀದಿ ದೀಪ, ಒಳಚರಂಡಿ ಸಮಸ್ಯೆಗಳಿಗೆ ಸ್ಪಂದಿಸದೆ ಹುಸಿ ಭರವಸೆ ಮಾತ್ರ ನೀಡುತ್ತಿರುವ ವಾರ್ಡ್ನ ಪಂಚಾಯಿತಿ ಸದಸ್ಯರಿಂದ ಶಾಸಕರವರೆಗಿನ ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದ ಬೇಸರಗೊಂಡಿದ್ದೇವೆ. ಮುಂದಿನ ಪಂಚಾಯಿತಿ ಚುನಾವಣೆಯನ್ನು ನಾವು ಬಹಿಷ್ಕರಿಸುತ್ತಿದ್ದೇವೆ ಎಂದು ಬ್ಯಾನರ್ನಲ್ಲಿ ಉಲ್ಲೇಖಿಸಿದ್ದಾರೆ.</p>.<p>ತಡೆಗೋಡೆ ನಿರ್ಮಿಸಿ ರಸ್ತೆ ಪುನರ್ ನಿರ್ಮಿಸುವಂತೆ ಎರಡು ವರ್ಷಗಳಿಂದ ಪಂಚಾಯಿತಿ, ತಹಶೀಲ್ದಾರ್ ಕಚೇರಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಅರ್ಜಿ ಸಲ್ಲಿಸಿದ್ದರೂ ಸ್ಪಂದನೆ ಸಿಕ್ಕಿಲ್ಲ ಎಂದು ನಿವಾಸಿಗಳು ದೂರಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>