ಮಂಗಳೂರು: 2014ರ ಲೋಕಸಭಾ ಚುನಾವಣೆಯಲ್ಲಿ ಇದ್ದ ಮೋದಿ ಅಲೆ ಈ ಬಾರಿ ಸುನಾಮಿಯಾಗಿ ಎನ್ ಡಿಎ ಮೈತ್ರಿಕೂಟಕ್ಕೆ ಭಾರಿ ಬಹುಮತ ತಂದಿದೆ ಎಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಹೇಳಿದರು.
ಮತ ಎಣಿಕೆ ಕೇಂದ್ರದ ಹೊರಗೆ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, 'ಪ್ರಧಾನಿ ನರೇಂದ್ರ ಮೋದಿಯವರ ಐದು ವರ್ಷಗಳ ಆಡಳಿತಕ್ಕೆ ಜನರ ಬೆಂಬಲ ದೊರಕಿದೆ.
ದೇಶದ ಅಭಿವೃದ್ಧಿ, ರಕ್ಷಣೆ ಮತ್ತು ಆಡಳಿತ ನಿರ್ವಹಣೆಗೆ ಮೋದಿಯೇ ಸಮರ್ಥ ನಾಯಕ ಎಂಬುದನ್ನು ಜನರು ಒಪ್ಪಿದ್ದಾರೆ. ಈ ಕಾರಣದಿಂದಾಗಿಯೇ ಅಭೂತಪೂರ್ವ ಬೆಂಬಲ ನೀಡಿದ್ದಾರೆ' ಎಂದರು.