<p><strong>ಮಂಗಳೂರು</strong>: ನಗರದ ರೊಸಾರಿಯೊದಲ್ಲಿ ಭಾರಿ ಮಳೆ ವೇಳೆ ತುಂಡಾಗಿ ನೆಲಕ್ಕುರುಳಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ರಿಕ್ಷಾ ಚಾಲಕರಿಬ್ಬರು ಮೃತಪಟ್ಟಿದ್ದಾರೆ. ಬುಧವಾರ ರಾತ್ರಿಯೇ ಈ ದುರ್ಘಟನೆ ಸಂಭವಿಸಿದ್ದು, ಗುರುವಾರ ನಸುಕಿನಲ್ಲಿ ಗೊತ್ತಾಗಿದೆ.</p>.<p>ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಪಾಳ್ಯ ಹೋಬಳಿಯ ರಾಜು (50) ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲ್ಲೂಕಿನ ರಾಮಕುಂಜದ ದೇವರಾಜ್ (46) ಮೃತರು ಎಂದು ಪೊಲೀಸರು ತಿಳಿಸಿದರು. </p>.<p>ಬಾಡಿಗೆ ಆಟೊ ರಿಕ್ಷಾವನ್ನು ಚಲಾಯಿಸುತ್ತಿದ್ದ ರಾಜು ಹಾಗೂ ದೇವರಾಜ್ ಇಬ್ಬರು ರೊಸಾರಿಯೊದಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದರು.</p>.<p>‘ರಿಕ್ಷಾ ತೊಳೆಯಲು ಹೋದ ರಾಜು ಅವರು ನೆಲಕ್ಕೆ ಬಿದ್ದಿದ್ದ ವಿದ್ಯುತ್ ತಂತಿಯನ್ನು ಸ್ಪರ್ಶಿಸಿದ್ದರು. ವಿದ್ಯುದಾಘಾತಕ್ಕೊಳಗಾದ ಅವರ ನರಳಾಟ ಕೇಳಿ ದೇವರಾಜ್ ನೆರವಿಗೆ ಧಾವಿಸಿದ್ದರು. ಗೋಣಿ ಚೀಲವೊಂದನ್ನು ಮೈಮೇಲೆ ಎಸೆದು ಅವರನ್ನು ರಕ್ಷಿಸಲು ಯತ್ನಿಸಿದ್ದರು. ಭಾರಿ ಮಳೆಯಾಗಿ ಆ ಸ್ಥಳದಲ್ಲಿ ನೀರು ಹರಿಯುತ್ತಿದ್ದರಿಂದ ದೇವರಾಜ್ ಅವರಿಗೂ ವಿದ್ಯುದಾಘಾತ ಉಂಟಾಗಿತ್ತು. ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ದೃಶ್ಯಗಳು ಸಿಸಿಟಿವಿ ಕ್ಯಾಮೆರಾವೊಂದರಲ್ಲಿ ದಾಖಲಾಗಿವೆ. ರಾತ್ರಿ ವೇಳೆ ಭಾರಿ ಮಳೆಯಾಗುತ್ತಿದ್ದುದರಿಂದ, ಅವರು ಮೃತಪಟ್ಟಿರುವುದು ಬೆಳಿಗ್ಗೆವರೆಗೂ ಗೊತ್ತಾಗಿರಲಿಲ್ಲ’ ಎಂದು ಪೊಲೀಸರು ಮಾಹಿತಿ ನೀಡಿದರು. </p>.<p>ನಗರ ದಕ್ಷಿಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ನಗರದ ರೊಸಾರಿಯೊದಲ್ಲಿ ಭಾರಿ ಮಳೆ ವೇಳೆ ತುಂಡಾಗಿ ನೆಲಕ್ಕುರುಳಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ರಿಕ್ಷಾ ಚಾಲಕರಿಬ್ಬರು ಮೃತಪಟ್ಟಿದ್ದಾರೆ. ಬುಧವಾರ ರಾತ್ರಿಯೇ ಈ ದುರ್ಘಟನೆ ಸಂಭವಿಸಿದ್ದು, ಗುರುವಾರ ನಸುಕಿನಲ್ಲಿ ಗೊತ್ತಾಗಿದೆ.</p>.<p>ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಪಾಳ್ಯ ಹೋಬಳಿಯ ರಾಜು (50) ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲ್ಲೂಕಿನ ರಾಮಕುಂಜದ ದೇವರಾಜ್ (46) ಮೃತರು ಎಂದು ಪೊಲೀಸರು ತಿಳಿಸಿದರು. </p>.<p>ಬಾಡಿಗೆ ಆಟೊ ರಿಕ್ಷಾವನ್ನು ಚಲಾಯಿಸುತ್ತಿದ್ದ ರಾಜು ಹಾಗೂ ದೇವರಾಜ್ ಇಬ್ಬರು ರೊಸಾರಿಯೊದಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದರು.</p>.<p>‘ರಿಕ್ಷಾ ತೊಳೆಯಲು ಹೋದ ರಾಜು ಅವರು ನೆಲಕ್ಕೆ ಬಿದ್ದಿದ್ದ ವಿದ್ಯುತ್ ತಂತಿಯನ್ನು ಸ್ಪರ್ಶಿಸಿದ್ದರು. ವಿದ್ಯುದಾಘಾತಕ್ಕೊಳಗಾದ ಅವರ ನರಳಾಟ ಕೇಳಿ ದೇವರಾಜ್ ನೆರವಿಗೆ ಧಾವಿಸಿದ್ದರು. ಗೋಣಿ ಚೀಲವೊಂದನ್ನು ಮೈಮೇಲೆ ಎಸೆದು ಅವರನ್ನು ರಕ್ಷಿಸಲು ಯತ್ನಿಸಿದ್ದರು. ಭಾರಿ ಮಳೆಯಾಗಿ ಆ ಸ್ಥಳದಲ್ಲಿ ನೀರು ಹರಿಯುತ್ತಿದ್ದರಿಂದ ದೇವರಾಜ್ ಅವರಿಗೂ ವಿದ್ಯುದಾಘಾತ ಉಂಟಾಗಿತ್ತು. ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ದೃಶ್ಯಗಳು ಸಿಸಿಟಿವಿ ಕ್ಯಾಮೆರಾವೊಂದರಲ್ಲಿ ದಾಖಲಾಗಿವೆ. ರಾತ್ರಿ ವೇಳೆ ಭಾರಿ ಮಳೆಯಾಗುತ್ತಿದ್ದುದರಿಂದ, ಅವರು ಮೃತಪಟ್ಟಿರುವುದು ಬೆಳಿಗ್ಗೆವರೆಗೂ ಗೊತ್ತಾಗಿರಲಿಲ್ಲ’ ಎಂದು ಪೊಲೀಸರು ಮಾಹಿತಿ ನೀಡಿದರು. </p>.<p>ನಗರ ದಕ್ಷಿಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>