ಮುಡಿಪು: ಎರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಕೊಣಾಜೆ ಗ್ರಾಮದ ಕುಂಟಾಲಗುಳಿಯಲ್ಲಿ ಮರವೊಂದು ವಿದ್ಯುತ್ ತಂತಿಯ ಮೇಲೆ ಬಿದ್ದು ಸೋಮವಾರ ರಾತ್ರಿ ಐದು ವಿದ್ಯುತ್ ಕಂಬಗಳು ಮುರಿದುಬಿದ್ದಿವೆ.
ಕಂಬ ಉರುಳಿದಾಗ ವಿದ್ಯುತ್ ಸಂಪರ್ಕ ಇರಲಿಲ್ಲ. ವಿದ್ಯುತ್ ಕಂಬಗಳು ನೆಲಕ್ಕೆ ಉರುಳಿರುವುದರಿಂದ ಕೊಣಾಜೆಯ ಕುಂಟಾಲಗುಳಿ, ನಡುಪದವು ಪರಿಸರದಲ್ಲಿ ಮಂಗಳವಾರ ಇಡೀ ದಿನ ವಿದ್ಯುತ್ ಪೂರೈಕೆ ಇರಲಿಲ್ಲ. ಮೆಸ್ಕಾಂ ಸಿಬ್ಬಂದಿ ಹೊಸ ಕಂಬ ಅಳವಡಿಸಿದರು.