ಬನ್ನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಕ್ಕಣಕ್ಕಿ, ಹಲಸೂರು, ದೇವದಾನ, ಕಾರೇಹಡ್ಲು, ಭದ್ರಾ ಎಸ್ಟೇಟ್ ಪ್ರದೇಶದಲ್ಲಿಯೂ ಕೆಲ ದಿನಗಳಿಂದ ನಿರಂತರವಾಗಿ ಕಾಡಾನೆಗಳು ರೈತರ ಜಮೀನುಗಳಿಗೆ ನುಗ್ಗಿ ಹಾನಿ ಮಾಡುತ್ತಿವೆ. ಜಕ್ಕಣಕ್ಕಿ ಗ್ರಾಮದಲ್ಲಿ ಮಂಗಳವಾರ ಎರಡು ಕಾಡಾನೆಗಳು ರೈತರೊಬ್ಬರ ತೋಟಕ್ಕೆ ಬಂದಿರುವುದನ್ನು ಸ್ಥಳೀಯರು ದೃಢಪಡಿಸಿದ್ದಾರೆ.