ಬಳಿಕ ಮಾತನಾಡಿದ ಡಿ.ವೀರೇಂದ್ರ ಹೆಗ್ಗಡೆ, ‘ಧರ್ಮಸ್ಥಳದಲ್ಲಿ ಜಾತ್ರೆ, ಉತ್ಸವ ಮೆರವಣಿಗೆ ಮೊದಲಾದ ವಿಶೇಷ ಸಂದರ್ಭಗಳಲ್ಲಿ ಗಜ ಸೇವೆಯನ್ನು ಬಳಸುವುದು ಸಂಪ್ರದಾಯವಾಗಿದೆ. ಈಗಾಗಲೇ ಲತಾ ಮತ್ತು ಲಕ್ಷ್ಮೀ ಎಂಬ ಎರಡು ಆನೆಗಳಿದ್ದು, 2020 ರ ಜುಲೈ 1ರಂದು ಬುಧವಾರ ಲಕ್ಷ್ಮೀ ಹೆಣ್ಣು ಮರಿಗೆ ಜನ್ಮ ನೀಡಿದೆ. ಶಿವನ ಸನ್ನಿಧಿಯಲ್ಲಿ ಇರುವುದರಿಂದ ‘ಶಿವಾನಿ’ ಎಂದು ನಾಮಕರಣ ಮಾಡಲಾಗಿದೆ’ ಎಂದರು.