ಚಿಕ್ಕಮಗಳೂರು ತಾಲ್ಲೂಕಿನ ಆಲ್ದೂರು ಗ್ರಾಮದ ಗಾಳಿಗಂಡಿಯ ಮೀನಾ ಎಂಬುವರನ್ನು ಹೆಡದಾಳ್ ಗ್ರಾಮದ ಬಳಿ ನಾಲ್ಕು ದಿನಗಳ ಹಿಂದೆ ಕಾಡಾನೆ ತುಳಿದು ಕೊಂದು ಹಾಕಿದ್ದರಿಂದ ಕಾಡಾನೆ ಸೆರೆಗೆ ಕಾರ್ಯಾಚರಣೆ ಆರಂಭವಾಗಿದೆ. ದಾಳಿ ನಡೆಸಿದ ಕಾಡಾನೆಯು ಚಂಡಗೋಡು, ಕಂಚಿಕಲ್ ದುರ್ಗಾ, ಕುಂದೂರು ಭಾಗದಲ್ಲಿ ಸಂಚರಿಸುತ್ತಿರುವ ಮಾಹಿತಿ ಇದ್ದು, ಕಾರ್ಯಚರಣೆಗೆ ಬಂದಿರುವ ಸಾಕಾನೆಗಳನ್ನು ಕುಂದೂರು ಸಮೀಪದ ದೊಡ್ಡಳ್ಳದಲ್ಲಿ ಇಳಿಸಲಾಗಿದೆ.