<p><strong>ಪುತ್ತೂರು: </strong>ರಸ್ತೆ ಬದಿಯಲ್ಲಿ ಬೀಳುವ ಹಂತದಲ್ಲಿರುವ ಮರ ಹಾಗೂ ಕುಸಿಯುವ ಅಪಾಯದಲ್ಲಿರುವ ಧರೆಯನ್ನು ತೆರವು ಮಾಡಬೇಕು ಎಂದು ಶಾಸಕ ಸಂಜೀವ ಮಠಂದೂರ ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.<p>ಪುತ್ತೂರು ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ನಡೆದ ಕೆಡಿಪಿ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>ಅಪಾಯಕಾರಿ ಮರಗಳನ್ನು ಅರಣ್ಯ ಇಲಾಖೆ ಗುರುತಿಸಬೇಕು. ವಿದ್ಯುತ್ ತಂತಿಗೆ ತೊಡಕಾಗುವ ಮರಗಳನ್ನು ಮೆಸ್ಕಾಂ ತೆರವುಗೊಳಿಸಬೇಕು ಎಂದರು.</p>.<p>ಪುತ್ತೂರು- ಉಪ್ಪಿನಂಗಡಿ ರಸ್ತೆ ಕಾಮಗಾರಿ ಸಂದರ್ಭ ಕೋಡಿಂಬಾಡಿ ಯಲ್ಲಿ ಜಲಸಿರಿ ಪೈಪ್ಲೈನ್ಗೆ ಸಮಸ್ಯೆಯಾಗಿದೆ. ಲೋಕೋಪಯೋಗಿ ಇಲಾಖೆ, ನಗರಸಭೆ ಮತ್ತು ಜಲಸಿರಿ ಯೋಜನೆಯ ಅಧಿಕಾರಿಗಳು ಸಮಸ್ಯೆ ಬಗೆಹರಿಸಬೇಕು ಎಂದರು.</p>.<p>ರಸ್ತೆ ಅತಿಕ್ರಮಗಳನ್ನು ಮುಲಾಜಿಲ್ಲದೇ ತೆರವುಗೊಳಿಸಬೇಕು. ರಸ್ತೆ ಇತ್ಯಾದಿ ಸಾರ್ವಜನಿಕ ಆಸ್ತಿಯನ್ನು ಅತಿಕ್ರಮಿಸಿಕೊಂಡು, ಸಮರ್ಪಕ ಸೆಟ್ಬ್ಯಾಕ್ ಇಲ್ಲದೇ ನಿರ್ಮಿಸಿದ ಕಟ್ಟಡಗಳಿಗೆ ಅನುಮತಿ ನೀಡಿದ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಿ ಎಂದು ಅವರು ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿಗೆ ಸೂಚಿಸಿದರು.</p>.<p>ಮುಂದಿನ ಕೆಡಿಪಿ ಸಭೆಯ ಮೊದಲು ನಗರದ ಎಪಿಎಂಸಿ ರಸ್ತೆಯನ್ನು ನಗರಸಭೆಗೆ ಹಸ್ತಾಂತರ ಮಾಡಬೇಕು. ಇಲ್ಲಿನ ರಸ್ತೆ ಅತಿಕ್ರಮಣಗಳನ್ನು ತೆರವುಗೊಳಿಸಬೇಕು. ತಹಶೀಲ್ದಾರ್ ಅವರೇ ಎಪಿಎಂಸಿ ಆಡಳಿತಾಧಿಕಾರಿ ಆಗಿದ್ದು, ಸಮಸ್ಯೆ ಬಗೆಹರಿಸಿ ಎಂದರು.</p>.<p>ನಿಡ್ಪಳ್ಳಿ ಗ್ರಾಮದ ಸಾರಕೂಟೇಲು ಸೇತುವೆಯನ್ನುಮೂರು ವಾರದೊಳಗೆ ಪೂರ್ಣಗೊಳಿಸಿ ವಾಹನಗಳ ಸಂಚಾರಕ್ಕೆ ಅವಕಾಶ ಮಾಡಿಕೊಡುವುದಾಗಿ ಲೋಕೋಪಯೋಗಿ ಇಲಾಖೆಯ ಅಧಿಕಾರಿ ರಾಜಾರಾಮ್ ಶಾಸಕರಿಗೆ ತಿಳಿಸಿದರು.<br />ಮಳೆ ನಿಂತ ತಕ್ಷಣವೇ ರಸ್ತೆ ಗುಂಡಿಗಳನ್ನು ಮುಚ್ಚುವುದಾಗಿ ಅಧಿಕಾರಿಗಳು ಉತ್ತರಿಸಿದರು.</p>.<p>ತಾಲ್ಲೂಕು ಪಂಚಾಯಿತಿ ಆಡಳಿತಾಧಿಕಾರಿ ಸಂಧ್ಯಾ, ಕಾರ್ಯ ನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ, ತಹಶೀಲ್ದಾರ್ ನಿಸರ್ಗಪ್ರಿಯ, ಡಿವೈಎಸ್ಪಿ ವೀರಯ್ಯ ಹಿರೇಮಠ, ಪೌರಾಯುಕ್ತ ಮಧು ಎಸ್. ಮನೋಹರ್ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪುತ್ತೂರು: </strong>ರಸ್ತೆ ಬದಿಯಲ್ಲಿ ಬೀಳುವ ಹಂತದಲ್ಲಿರುವ ಮರ ಹಾಗೂ ಕುಸಿಯುವ ಅಪಾಯದಲ್ಲಿರುವ ಧರೆಯನ್ನು ತೆರವು ಮಾಡಬೇಕು ಎಂದು ಶಾಸಕ ಸಂಜೀವ ಮಠಂದೂರ ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.<p>ಪುತ್ತೂರು ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ನಡೆದ ಕೆಡಿಪಿ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>ಅಪಾಯಕಾರಿ ಮರಗಳನ್ನು ಅರಣ್ಯ ಇಲಾಖೆ ಗುರುತಿಸಬೇಕು. ವಿದ್ಯುತ್ ತಂತಿಗೆ ತೊಡಕಾಗುವ ಮರಗಳನ್ನು ಮೆಸ್ಕಾಂ ತೆರವುಗೊಳಿಸಬೇಕು ಎಂದರು.</p>.<p>ಪುತ್ತೂರು- ಉಪ್ಪಿನಂಗಡಿ ರಸ್ತೆ ಕಾಮಗಾರಿ ಸಂದರ್ಭ ಕೋಡಿಂಬಾಡಿ ಯಲ್ಲಿ ಜಲಸಿರಿ ಪೈಪ್ಲೈನ್ಗೆ ಸಮಸ್ಯೆಯಾಗಿದೆ. ಲೋಕೋಪಯೋಗಿ ಇಲಾಖೆ, ನಗರಸಭೆ ಮತ್ತು ಜಲಸಿರಿ ಯೋಜನೆಯ ಅಧಿಕಾರಿಗಳು ಸಮಸ್ಯೆ ಬಗೆಹರಿಸಬೇಕು ಎಂದರು.</p>.<p>ರಸ್ತೆ ಅತಿಕ್ರಮಗಳನ್ನು ಮುಲಾಜಿಲ್ಲದೇ ತೆರವುಗೊಳಿಸಬೇಕು. ರಸ್ತೆ ಇತ್ಯಾದಿ ಸಾರ್ವಜನಿಕ ಆಸ್ತಿಯನ್ನು ಅತಿಕ್ರಮಿಸಿಕೊಂಡು, ಸಮರ್ಪಕ ಸೆಟ್ಬ್ಯಾಕ್ ಇಲ್ಲದೇ ನಿರ್ಮಿಸಿದ ಕಟ್ಟಡಗಳಿಗೆ ಅನುಮತಿ ನೀಡಿದ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಿ ಎಂದು ಅವರು ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿಗೆ ಸೂಚಿಸಿದರು.</p>.<p>ಮುಂದಿನ ಕೆಡಿಪಿ ಸಭೆಯ ಮೊದಲು ನಗರದ ಎಪಿಎಂಸಿ ರಸ್ತೆಯನ್ನು ನಗರಸಭೆಗೆ ಹಸ್ತಾಂತರ ಮಾಡಬೇಕು. ಇಲ್ಲಿನ ರಸ್ತೆ ಅತಿಕ್ರಮಣಗಳನ್ನು ತೆರವುಗೊಳಿಸಬೇಕು. ತಹಶೀಲ್ದಾರ್ ಅವರೇ ಎಪಿಎಂಸಿ ಆಡಳಿತಾಧಿಕಾರಿ ಆಗಿದ್ದು, ಸಮಸ್ಯೆ ಬಗೆಹರಿಸಿ ಎಂದರು.</p>.<p>ನಿಡ್ಪಳ್ಳಿ ಗ್ರಾಮದ ಸಾರಕೂಟೇಲು ಸೇತುವೆಯನ್ನುಮೂರು ವಾರದೊಳಗೆ ಪೂರ್ಣಗೊಳಿಸಿ ವಾಹನಗಳ ಸಂಚಾರಕ್ಕೆ ಅವಕಾಶ ಮಾಡಿಕೊಡುವುದಾಗಿ ಲೋಕೋಪಯೋಗಿ ಇಲಾಖೆಯ ಅಧಿಕಾರಿ ರಾಜಾರಾಮ್ ಶಾಸಕರಿಗೆ ತಿಳಿಸಿದರು.<br />ಮಳೆ ನಿಂತ ತಕ್ಷಣವೇ ರಸ್ತೆ ಗುಂಡಿಗಳನ್ನು ಮುಚ್ಚುವುದಾಗಿ ಅಧಿಕಾರಿಗಳು ಉತ್ತರಿಸಿದರು.</p>.<p>ತಾಲ್ಲೂಕು ಪಂಚಾಯಿತಿ ಆಡಳಿತಾಧಿಕಾರಿ ಸಂಧ್ಯಾ, ಕಾರ್ಯ ನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ, ತಹಶೀಲ್ದಾರ್ ನಿಸರ್ಗಪ್ರಿಯ, ಡಿವೈಎಸ್ಪಿ ವೀರಯ್ಯ ಹಿರೇಮಠ, ಪೌರಾಯುಕ್ತ ಮಧು ಎಸ್. ಮನೋಹರ್ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>