‘ಎಂಡೋಸಲ್ಫಾನ್ ಸಂತ್ರಸ್ತರಿಗೆ ಪಾಲನಾ ಕೇಂದ್ರದ ಸೇವೆ, ಔಷಧ ವಿತರಣೆ ಸೇರಿದಂತೆ ಕೌಶಲ ಅಭಿವೃದ್ಧಿ ತರಬೇತಿ ಕೇಂದ್ರದ ಸೇವೆಗಳನ್ನು ಒದಗಿಸಲಾಗುತ್ತಿದೆ. ಕೊವೀಡ್-19 ಹಿನ್ನೆಲೆಯಲ್ಲಿ ಸಂತ್ರಸ್ತ ಮಕ್ಕಳು ಕೇಂದ್ರಕ್ಕೆ ಬರಲು ಅವಕಾಶವಿಲ್ಲದೇ ಇರುವುದರಿಂದ, ಕೇಂದ್ರದ ಸಿಬ್ಬಂದಿ ಮೂಲಕ ಅವರ ಮನೆಗೆ ಭೇಟಿ ನೀಡಿ, ಸೇವೆಗಳನ್ನು ನೀಡುತ್ತಿದ್ದಾರೆ’ ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ರಾಮಚಂದ್ರ ಬಾಯರಿ ಹೇಳಿದರು.