ಸಸ್ಯವಿಜ್ಞಾನಿಯೂ, ದಕ್ಷ ಆಡಳಿತಗಾರರೂ ಆಗಿದ್ದ ಬಿ.ಯಶೋವರ್ಮ ಅವರು 23ವರ್ಷ ಕಾಲೇಜಿನ ಪ್ರಾಂಶುಪಾಲರಾಗಿ 18 ವರ್ಷ ಎಸ್ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಯಾಗಿ ಉಜಿರೆಯನ್ನು ಜ್ಞಾನಕಾಶಿಯಾಗಿಯೂ, ಸಸ್ಯಕಾಶಿಯಾಗಿಯೂ ಬೆಳೆಸಿದ್ದಾರೆ. ಸಿದ್ಧವನದ ಬಳಿ ಗಿಡಮೂಲಿಕೆಗಳ ಸಸ್ಯೋದ್ಯಾನ, ಕಾಲೇಜು ವಠಾರದಲ್ಲಿ ಸುಂದರ ಉದ್ಯಾನ, ಔಷಧೀಯ ಗಿಡಗಳು, ಎಲ್ಲ ಶಾಲೆ-ಕಾಲೇಜುಗಳ ಪರಿಸರದಲ್ಲಿ ಉದ್ಯಾನ, ವಿದ್ಯಾರ್ಥಿನಿಲಯಗಳಲ್ಲಿ ಬಳಸಿದ ನೀರನ್ನು ಉದ್ಯಾನ, ಗಿಡಗಳಿಗೆ ಮರುಬಳಕೆ ಮಾಡುವಂತೆ ಯೋಜನೆ ರೂಪಿಸಿದ್ದರು ಎಂದರು.