ಕೋವಿಡ್ ಸಂದರ್ಭದಲ್ಲಿ ಸಮರ್ಥವಾಗಿ ಕಾರ್ಯ ನಿರ್ವಹಿಸದ ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಅವರನ್ನು ಸಚಿವ ಸ್ಥಾನದಿಂದ ಕಳೆಗಿಳಿಸಲಾಯಿತು. ಐಟಿಯಲ್ಲಿ ಸಾಕಷ್ಟು ಭ್ರಷ್ಟಾಚಾರವಾದ ಹಿನ್ನೆಲೆಯಲ್ಲಿ ಸಚಿವ ರವಿಶಂಕರ್ ಪ್ರಸಾದ್ ಅವರನ್ನು ಸಂಪುಟದಿಂದ ಕೈಬಿಡಲಾಯಿತು. ಉತ್ತರಾಖಂಡದಲ್ಲೂ ಇಂತಹ ನಿದರ್ಶನಗಳಿವೆ. ಆದರೆ ರಾಷ್ಟ್ರ, ರಾಜ್ಯ ಮಟ್ಟದಲ್ಲಿ ಬಿಜೆಪಿ ಅದಕ್ಷ ಆಡಳಿತ ನಡೆಸುತ್ತಿದೆ. ಬಿಜೆಪಿ ತನ್ನ ಅಂತ್ಯವನ್ನು ತಾನೇ ಕಾಣಲಿದೆ ಎಂದರು.