‘ಬಿಜೆಪಿಯ ಯೋಜನೆಗಳು ಪ್ರಚಾರದಲ್ಲಿ ಇವೆಯೇ ಹೊರತು ಅನುಷ್ಠಾನದಲ್ಲಿ ಇಲ್ಲ. ದಿನಬಳಕೆಯ ವಸ್ತುಗಳ, ಅಡುಗೆ ಅನಿಲ, ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಸೇರಿದಂತೆ ನಿರುದ್ಯೋಗ ಸಮಸ್ಯೆ, ರೈತರ ಸಮಸ್ಯೆ, ಸಾರ್ವಜನಿಕ ಸಂಸ್ಥೆಗಳ ಖಾಸಗೀಕರಣ ಸೇರಿದಂತೆ ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳಿಂದ ದೇಶದ ಜನತೆ ಅಕ್ರೋಶ ಭರಿತರಾಗಿದ್ದು, ಮೋದಿಯವರ ಸಭೆಗಳಲ್ಲಿ ಭಾಗವಹಿಸುತ್ತಿಲ್ಲ. ಮೋದಿಯವರು ಯಾವಾಗಲೂ ಸುಳ್ಳು ಹೇಳಿ ಜನರನ್ನು ಮೋಸ ಮಾಡಲು ಸಾಧ್ಯವಿಲ್ಲ ಎಂಬುದನ್ನು ಬಿಜೆಪಿ ಅರಿತುಕೊಂಡರೆ ಉತ್ತಮ’ ಎಂದರು.