<p><strong>ಮೂಡುಬಿದಿರೆ:</strong> ‘ಹದಿಹರೆಯದಲ್ಲಿ ವ್ಯವಸ್ಥೆಯ ವಿರುದ್ಧ ಅಸಹನೆ, ಅಕ್ರೋಶ, ಸವಾಲು ಸಾಮಾನ್ಯವಾಗಿದ್ದು, ಇಂಥ ಸಿಟ್ಟನ್ನು ಧನಾತ್ಮಕ ಉದ್ದೇಶಗಳಿಗೆ ವಿನಿಯೋಗಿಸುವುದರ ಮೂಲಕ ಜೀವನದಲ್ಲಿ ಸಾರ್ಥಕ್ಯವನ್ನು ಕಾಣಬಹುದು’ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರೆ ಶಾಜಿಯಾಇಲ್ಮಿ ಹೇಳಿದರು.</p>.<p>ಇಲ್ಲಿನ ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ತನ್ನ ಏಳಿಗೆಯನ್ನಷ್ಟೇ ಗಮನದಲ್ಲಿಟ್ಟುಕೊಂಡು ಕಾರ್ಯನಿರ್ವಹಿಸಿದರೆ ಸವಾಲುಗಳು ಎದುರಾದಾಗ ಎದೆಗುಂದುತ್ತೇವೆ. ಉಳಿದವರ ಹಿತದಲ್ಲಿ ನಮ್ಮ ಹಿತ ಅಡಗಿರುತ್ತದೋ ಆಗ ಸವಾಲುಗಳನ್ನು ಮೀರಿ ಮುನ್ನಡೆಯಲು ಸಾಧ್ಯವಾಗುತ್ತದೆ. ನಮ್ಮ ಬಾಹ್ಯ ಪ್ರಪಂಚಕ್ಕಿಂತ ನಮ್ಮ ಆಂತರಿಕ ಪ್ರಪಂಚ ಮುಖ್ಯವಾಗುತ್ತದೆ’ ಎಂದರು.</p>.<p>ವೃತ್ತಿಯನ್ನು ನಾವು ಪ್ರೀತಿಸಿದಾಗ ಮಾತ್ರ ನಮ್ಮ ಬದುಕು ಹಸನಾಗುತ್ತದೆ. ಯಾವ ಕೆಲಸ ನಮಗೆ ಹಣಕ್ಕಿಂತ ನೆಮ್ಮದಿ ತಂದುಕೊಡುತ್ತದೆ ಎಂಬುದನ್ನು ಅರಿತುಕೊಳ್ಳಬೇಕು ಎಂದು ಸಲಹೆ ನೀಡಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಅಧ್ಯಕ್ಷ ಯುವರಾಜ್ ಜೈನ್ ಮಾತನಾಡಿ, ಧೃಢ ಸಂಕಲ್ಪ, ಛಲ ಇದ್ದರೆ ಯಶಸ್ಸು ಗಳಿಸಲು ಸಾಧ್ಯ ಎಂದರು.</p>.<p>ಸಂಸ್ಥೆಯ ಕಾರ್ಯದರ್ಶಿ ರಶ್ಮಿತಾ ಜೈನ್, ಶೈಕ್ಷಣಿಕ ನಿರ್ದೇಶಕ ಡಾ.ಬಿ.ಪಿ.ಸಂಪತ್ಕುಮಾರ್, ಪ್ರಾಂಶುಪಾಲ ಪ್ರದೀಪ್ಕುಮಾರ್ ಶೆಟ್ಟಿ ಇದ್ದರು. ವಿಕ್ರಮ್ ನಾಯಕ್ ನಿರೂಪಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೂಡುಬಿದಿರೆ:</strong> ‘ಹದಿಹರೆಯದಲ್ಲಿ ವ್ಯವಸ್ಥೆಯ ವಿರುದ್ಧ ಅಸಹನೆ, ಅಕ್ರೋಶ, ಸವಾಲು ಸಾಮಾನ್ಯವಾಗಿದ್ದು, ಇಂಥ ಸಿಟ್ಟನ್ನು ಧನಾತ್ಮಕ ಉದ್ದೇಶಗಳಿಗೆ ವಿನಿಯೋಗಿಸುವುದರ ಮೂಲಕ ಜೀವನದಲ್ಲಿ ಸಾರ್ಥಕ್ಯವನ್ನು ಕಾಣಬಹುದು’ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರೆ ಶಾಜಿಯಾಇಲ್ಮಿ ಹೇಳಿದರು.</p>.<p>ಇಲ್ಲಿನ ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ತನ್ನ ಏಳಿಗೆಯನ್ನಷ್ಟೇ ಗಮನದಲ್ಲಿಟ್ಟುಕೊಂಡು ಕಾರ್ಯನಿರ್ವಹಿಸಿದರೆ ಸವಾಲುಗಳು ಎದುರಾದಾಗ ಎದೆಗುಂದುತ್ತೇವೆ. ಉಳಿದವರ ಹಿತದಲ್ಲಿ ನಮ್ಮ ಹಿತ ಅಡಗಿರುತ್ತದೋ ಆಗ ಸವಾಲುಗಳನ್ನು ಮೀರಿ ಮುನ್ನಡೆಯಲು ಸಾಧ್ಯವಾಗುತ್ತದೆ. ನಮ್ಮ ಬಾಹ್ಯ ಪ್ರಪಂಚಕ್ಕಿಂತ ನಮ್ಮ ಆಂತರಿಕ ಪ್ರಪಂಚ ಮುಖ್ಯವಾಗುತ್ತದೆ’ ಎಂದರು.</p>.<p>ವೃತ್ತಿಯನ್ನು ನಾವು ಪ್ರೀತಿಸಿದಾಗ ಮಾತ್ರ ನಮ್ಮ ಬದುಕು ಹಸನಾಗುತ್ತದೆ. ಯಾವ ಕೆಲಸ ನಮಗೆ ಹಣಕ್ಕಿಂತ ನೆಮ್ಮದಿ ತಂದುಕೊಡುತ್ತದೆ ಎಂಬುದನ್ನು ಅರಿತುಕೊಳ್ಳಬೇಕು ಎಂದು ಸಲಹೆ ನೀಡಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಅಧ್ಯಕ್ಷ ಯುವರಾಜ್ ಜೈನ್ ಮಾತನಾಡಿ, ಧೃಢ ಸಂಕಲ್ಪ, ಛಲ ಇದ್ದರೆ ಯಶಸ್ಸು ಗಳಿಸಲು ಸಾಧ್ಯ ಎಂದರು.</p>.<p>ಸಂಸ್ಥೆಯ ಕಾರ್ಯದರ್ಶಿ ರಶ್ಮಿತಾ ಜೈನ್, ಶೈಕ್ಷಣಿಕ ನಿರ್ದೇಶಕ ಡಾ.ಬಿ.ಪಿ.ಸಂಪತ್ಕುಮಾರ್, ಪ್ರಾಂಶುಪಾಲ ಪ್ರದೀಪ್ಕುಮಾರ್ ಶೆಟ್ಟಿ ಇದ್ದರು. ವಿಕ್ರಮ್ ನಾಯಕ್ ನಿರೂಪಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>