‘ಮರವೂರಿನಲ್ಲಿ ನದಿದಂಡೆಯ ಸುತ್ತ ಅಕ್ರಮ ಮರಳು ಗಣಿಗಾರಿಕೆ, ಹಿಟಾಚಿ, ಡ್ರೆಜ್ಜಿಂಗ್ ಯಂತ್ರದ ಬಳಕೆಯಾಗುತ್ತಿರುವ ಕುರಿತು ಗ್ರಾಮಸ್ಥರು ಹಲವಾರು ಬಾರಿ ಆಕ್ಷೇಪ ಎತ್ತಿದ್ದರು. ಸೇತುವೆ ಕುಸಿಯುವ ಆತಂಕವನ್ನೂ ವ್ಯಕ್ತಪಡಿಸಿದ್ದರು. ಆದರೆ, ಜನರ ಧ್ವನಿಯನ್ನು ಹತ್ತಿಕ್ಕಲಾಗಿದೆ. ಯಂತ್ರಗಳ ಮೂಲಕ ನಡೆಸಿದ ಮರಳು ದಂಧೆ ಈಗ ಸೇತುವೆಯ ಕಂಬಗಳನ್ನೇ ಅಲ್ಲಾಡಿಸಿದೆ’ ಎಂದು ಡಿವೈಎಫ್ಐ ರಾಜ್ಯ ಘಟಕದ ಅಧ್ಯಕ್ಷ ಮುನೀರ್ ಕಾಟಿಪಳ್ಳ ಆರೋಪಿಸಿದ್ದಾರೆ.