ಹೊಸ ಮದ್ಯದಂಗಡಿ ಇಲ್ಲ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಆಶ್ರಯದಲ್ಲಿ ಮದ್ಯಪಾನದ ವಿರುದ್ಧ ಹೋರಾಟ ಹಾಗೂ ಜನಜಾಗೃತಿ ಮೂಡಿಸಿ ಗಾಂಧಿ ಜಯಂತಿ ದಿನ ವ್ಯಸನಮುಕ್ತರನ್ನು ರಾಜ್ಯದೆಲ್ಲೆಡೆ ಅಭಿನಂದಿಸುವ ಕಾರ್ಯಕ್ರಮದ ಬಗ್ಗೆ ಗಮನ ಸೆಳೆದಾಗ, ಅದೂ ಉತ್ತಮ ಕಾರ್ಯವಾಗಿದೆ. ಅವರ ಕೆಲಸ ಅವರು ಮಾಡುತ್ತಾರೆ, ನಮ್ಮ ಕೆಲಸ ನಾವು ಮಾಡುತ್ತೇವೆ ಎಂದು ಹೇಳಿದರು. ಹೊಸ ಮದ್ಯದಂಗಡಿಗೆ ಪರವಾನಗಿ ನೀಡುವುದಿಲ್ಲ ಎಂದು ಸಚಿವರು ತಿಳಿಸಿದರು.