‘ಅಂದು ಮಧ್ಯಾಹ್ನ 1.09ರ ಸುಮಾರಿಗೆ ವಾಟ್ಸ್ಆ್ಯಪ್ ಬಳಸಿ ಕರೆ ಮಾಡಿದ್ದ ವ್ಯಕ್ತಿ, ‘ಲೋಕಾಯುಕ್ತದಿಂದ ಮಾತನಾಡುತ್ತಿದ್ದೇವೆ. ನಿಮ್ಮ ವಿರುದ್ಧ ದೂರು ಬಂದಿದೆ. ಸಾಹೇಬರು ಮಾತನಾಡುತ್ತಾರೆ ಎಂದು ಬೇರೊಬ್ಬ ವ್ಯಕ್ತಿಗೆ ಪೋನ್ ಕೊಟ್ಟಿದ್ದರು. ಆ ವ್ಯಕ್ತಿಯು ನಿಮ್ಮ ಕಚೇರಿಗೆ ಬರುವ ಮೊದಲು ಈ ವಿಚಾರವನ್ನು ಸರಿ ಮಾಡುವುದಾದರೆ ಮಾಡುವ’ ಎಂದು ಹೇಳಿ ಮೊದಲು ಮಾತನಾಡಡಿದ್ದ ವ್ಯಕ್ತಿಗೆ ಪೋನ್ ಕೊಟ್ಟಿದ್ದರು. ಅಲ್ಲದೇ ₹ 80 ಸಾವಿರವನ್ನು ಪೋನ್ ಪೇ ಮೂಲಕ ಕಳುಹಿಸಲು ಹೇಳಿದ್ದರು.’