<p><strong>ಪುತ್ತೂರು:</strong> ಕೆಲ ದಿನಗಳ ಹಿಂದೆ ಸುರಿದ ಭಾರಿ ಮಳೆಯಿಂದಾಗಿ ಬಡಗನ್ನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಡಗನ್ನೂರು ಗ್ರಾಮದ ಕುಕ್ಕಾಜೆ ಎಂಬಲ್ಲಿ ಮನೆ ಕುಸಿದಿದ್ದು, ಈ ಕುಟುಂಬ ಅತಂತ್ರ ಸ್ಥಿತಿಗೆ ತಲುಪಿದೆ.</p>.<p>ಮನೆಯ ಚಾವಣಿ ಸಂಪೂರ್ಣವಾಗಿ ಕುಸಿದಿರುವುದರಿಂದ ಸೀತಾ ಅವರ ಕುಟುಂಬ ಸಮಸ್ಯೆಗೀಡಾಗಿದೆ. ಮನೆಯ ಮುಂಭಾಗದ ಗೋಡೆಯೂ ಕುಸಿದಿರುವುದರಿಂದ ವಾಸ್ತವ್ಯಕ್ಕೆ ತೊಡಕಾಗಿದೆ. ಕಳೆದ ಬಾರಿಯೂ ಅವರ ಮನೆ ಕುಸಿದಿತ್ತು. ಪ್ರಾಕೃತಿಕ ವಿಕೋಪ ಪಡಿಹಾರವಾಗಿ ಅವರಿಗೆ ಸರ್ಕಾರದಿಂದ ₹ 6 ಸಾವಿರ ಪರಿಹಾರ ಮಂಜೂರಾಗಿತ್ತು. </p>.<p>ಸೀತಾ ಅವರಿಗೆ ಬಡಗನ್ನೂರು ಗ್ರಾಮ ಪಂಚಾಯಿತಿಯಿಂದ ವಸತಿ ಯೋಜನೆಯಡಿ ಆದ್ಯತೆಯಲ್ಲಿ ಮನೆ ಮಂಜೂರು ಮಾಡಲು ತೀರ್ಮಾನಿಸಲಾಗಿತ್ತು. ಆದರೆ, ಸರ್ಕಾರದಿಂದ ಪ್ರಾಕೃತಿಕ ವಿಕೋಪದಡಿ ₹ 6 ಸಾವಿರ ಪರಿಹಾರ ಬಂದಿದ್ದ ಕಾರಣ ಕಾನೂನು ತೊಡಕು ಎದುರಾಗಿತ್ತು. ಇದರಿಂದ ವಸತಿ ಯೋಜನೆಯಡಿ ಹೊಸ ಮನೆ ಮಂಜೂರು ಮಾಡಲು ಸಾಧ್ಯವಾಗಿರಲಿಲ್ಲ ಎಂಬ ಮಾಹಿತಿ ಲಭಿಸಿದೆ. </p>.<p>ಸೀತಾ ಮತ್ತು ಅವರ 6 ಮಕ್ಕಳನ್ನೊಳಗೊಂಡ ಕುಟುಂಬ ಅತಂತ್ರವಾಗಿದೆ. ಕುಟುಂಬಕ್ಕೆ ಸರ್ಕಾರದಿಂದ ಪೂರ್ಣ ಪ್ರಮಾಣದ ಪರಿಹಾರ ಅಥವಾ ವಸತಿ ಯೋಜನೆಯಡಿ ಮನೆ ನೀಡಬೇಕು ಎಂದು ಎಂದು ಬಡಗನ್ನೂರು ಗ್ರಾಮ ಪಂಚಾಯಿತಿ ಸದಸ್ಯ ಸಂತೋಷ್ ಆಳ್ವ ಗಿರಿಮನೆ ಅವರು, ಈ ಬಾರಿ ಆದ್ಯತೆಯಲ್ಲಿ ಅವರಿಗೆ ವಸತಿ ಯೋಜನೆಯಡಿ ಮನೆ ಮಂಜೂರು ಮಾಡುವುದಾಗಿ ತಿಳಿಸಿದ್ದಾರೆ. <br /><br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪುತ್ತೂರು:</strong> ಕೆಲ ದಿನಗಳ ಹಿಂದೆ ಸುರಿದ ಭಾರಿ ಮಳೆಯಿಂದಾಗಿ ಬಡಗನ್ನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಡಗನ್ನೂರು ಗ್ರಾಮದ ಕುಕ್ಕಾಜೆ ಎಂಬಲ್ಲಿ ಮನೆ ಕುಸಿದಿದ್ದು, ಈ ಕುಟುಂಬ ಅತಂತ್ರ ಸ್ಥಿತಿಗೆ ತಲುಪಿದೆ.</p>.<p>ಮನೆಯ ಚಾವಣಿ ಸಂಪೂರ್ಣವಾಗಿ ಕುಸಿದಿರುವುದರಿಂದ ಸೀತಾ ಅವರ ಕುಟುಂಬ ಸಮಸ್ಯೆಗೀಡಾಗಿದೆ. ಮನೆಯ ಮುಂಭಾಗದ ಗೋಡೆಯೂ ಕುಸಿದಿರುವುದರಿಂದ ವಾಸ್ತವ್ಯಕ್ಕೆ ತೊಡಕಾಗಿದೆ. ಕಳೆದ ಬಾರಿಯೂ ಅವರ ಮನೆ ಕುಸಿದಿತ್ತು. ಪ್ರಾಕೃತಿಕ ವಿಕೋಪ ಪಡಿಹಾರವಾಗಿ ಅವರಿಗೆ ಸರ್ಕಾರದಿಂದ ₹ 6 ಸಾವಿರ ಪರಿಹಾರ ಮಂಜೂರಾಗಿತ್ತು. </p>.<p>ಸೀತಾ ಅವರಿಗೆ ಬಡಗನ್ನೂರು ಗ್ರಾಮ ಪಂಚಾಯಿತಿಯಿಂದ ವಸತಿ ಯೋಜನೆಯಡಿ ಆದ್ಯತೆಯಲ್ಲಿ ಮನೆ ಮಂಜೂರು ಮಾಡಲು ತೀರ್ಮಾನಿಸಲಾಗಿತ್ತು. ಆದರೆ, ಸರ್ಕಾರದಿಂದ ಪ್ರಾಕೃತಿಕ ವಿಕೋಪದಡಿ ₹ 6 ಸಾವಿರ ಪರಿಹಾರ ಬಂದಿದ್ದ ಕಾರಣ ಕಾನೂನು ತೊಡಕು ಎದುರಾಗಿತ್ತು. ಇದರಿಂದ ವಸತಿ ಯೋಜನೆಯಡಿ ಹೊಸ ಮನೆ ಮಂಜೂರು ಮಾಡಲು ಸಾಧ್ಯವಾಗಿರಲಿಲ್ಲ ಎಂಬ ಮಾಹಿತಿ ಲಭಿಸಿದೆ. </p>.<p>ಸೀತಾ ಮತ್ತು ಅವರ 6 ಮಕ್ಕಳನ್ನೊಳಗೊಂಡ ಕುಟುಂಬ ಅತಂತ್ರವಾಗಿದೆ. ಕುಟುಂಬಕ್ಕೆ ಸರ್ಕಾರದಿಂದ ಪೂರ್ಣ ಪ್ರಮಾಣದ ಪರಿಹಾರ ಅಥವಾ ವಸತಿ ಯೋಜನೆಯಡಿ ಮನೆ ನೀಡಬೇಕು ಎಂದು ಎಂದು ಬಡಗನ್ನೂರು ಗ್ರಾಮ ಪಂಚಾಯಿತಿ ಸದಸ್ಯ ಸಂತೋಷ್ ಆಳ್ವ ಗಿರಿಮನೆ ಅವರು, ಈ ಬಾರಿ ಆದ್ಯತೆಯಲ್ಲಿ ಅವರಿಗೆ ವಸತಿ ಯೋಜನೆಯಡಿ ಮನೆ ಮಂಜೂರು ಮಾಡುವುದಾಗಿ ತಿಳಿಸಿದ್ದಾರೆ. <br /><br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>