<p><strong>ಮಂಗಳೂರು</strong>: ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ವಿರುದ್ಧ ನಡೆಯುತ್ತಿರುವ ರೈತರ ಹೋರಾಟವನ್ನು ‘ನಕಲಿ ಹೋರಾಟ’ ಎಂದು ಅಪಹಾಸ್ಯ ಮಾಡಿದಯಕ್ಷಗಾನದವಿಡಿಯೊ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು,ರೈತ ಸಂಘಟನೆಗಳು ಆಕ್ಷೇಪ ವ್ಯಕ್ತಪಡಿಸಿವೆ.</p>.<p>ಯಕ್ಷಗಾನದವೇದಿಕೆಯಲ್ಲಿ ಕಲಾವಿದರು ಕೇಂದ್ರ ಸರ್ಕಾರದ ಕೃಷಿ ಕಾಯ್ದೆಯನ್ನು ಉಲ್ಲೇಖಿಸಿ, ‘ಹಲವಾರುತಿಂಗಳುಗಳಿಂದ ಹಸಿರು ಶಾಲು, ಟೊಪ್ಪಿ ಧರಿಸಿ ಹೋರಾಟ ಮಾಡುತ್ತಿರುವವರು ನಿಜವಾದ ರೈತರಲ್ಲ, ನಕಲಿಗಳು. ಅವರು ಆರು ವರ್ಷ ಹೋರಾಟ ನಡೆಸಿದರೂ ಏನೂ ಆಗುವುದಿಲ್ಲ’ ಎಂದು ಹೇಳಿದ್ದಾರೆ.</p>.<p>‘ರೈತರು ರಸ್ತೆಯಲ್ಲಿ ಕುಳಿತಿದ್ದರೆ ನಮಗೆ ಅಕ್ಕಿ ಎಲ್ಲಿಂದ ಸಿಗುತ್ತಿತ್ತು ? ನಿಜವಾದ ರೈತರು ಇನ್ನೂ ಗದ್ದೆಯಲ್ಲೇ ಇದ್ದಾರೆ’ ಎಂದು ಟೀಕಿಸಿದ್ದಾರೆ.</p>.<p><strong>ಖಂಡನೆ: </strong>‘ರೈತರನ್ನು ಅವಮಾನಿಸುವ, ರಾಜಕೀಯ ಪಕ್ಷಗಳ ಪರವಾಗಿ ಮಾತನಾಡುವ ಮಾತುಗಾರಿಕೆಯು ಯಕ್ಷಗಾನದ ಘನತೆಗೆ ಕುಂದು ತರುವಂತಾಗಿದೆ’ ಎಂದು ರೈತ ಸಂಘದ ಮುಖಂಡರು ಖಂಡಿಸಿದ್ದಾರೆ.</p>.<p>‘ರೈತ ಚಳವಳಿಯ ಬಗ್ಗೆ ನಡೆಸುತ್ತಿರುವ ಅಪಪ್ರಚಾರಕ್ಕೆ ಯಕ್ಷಗಾನ ಕಲೆಯನ್ನು ಬಳಸಿಕೊಳ್ಳುತ್ತಿರುವುದು ಖಂಡನೀಯ. ಆ ಮೂಲಕ ಯಕ್ಷಗಾನವನ್ನೂ ಕೆಡಿಸುವ ಹುನ್ನಾರ ಮಾಡುತ್ತಿದ್ದಾರೆ’ ಎಂದು ಕರ್ನಾಟಕ ಪ್ರಾಂತ ಪ್ರದೇಶ ರೈತ ಸಂಘದ ಉಪಾಧ್ಯಕ್ಷ ಯಾದವ ಶೆಟ್ಟಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.</p>.<p>‘ಯಕ್ಷಗಾನದ ಬಗ್ಗೆ ಗೌರವ ಇದೆ. ಆದರೆ,ಜೀವನಾನುಭವ ಇಲ್ಲದವರು ಕಲೆಯ ಮೂಲಕ ಅನ್ನದಾತರನ್ನೇ ಹೀಯಾಳಿಸುವುದು ನೋವು ಉಂಟು ಮಾಡಿದೆ’ ಎಂದು ರಾಜ್ಯ ರೈತ ಸಂಘದ ಪ್ರಧಾನ ಕಾರ್ಯದರ್ಶಿ ರವಿಕಿರಣ್ ಪುಣಚ ಬೇಸರ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ವಿರುದ್ಧ ನಡೆಯುತ್ತಿರುವ ರೈತರ ಹೋರಾಟವನ್ನು ‘ನಕಲಿ ಹೋರಾಟ’ ಎಂದು ಅಪಹಾಸ್ಯ ಮಾಡಿದಯಕ್ಷಗಾನದವಿಡಿಯೊ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು,ರೈತ ಸಂಘಟನೆಗಳು ಆಕ್ಷೇಪ ವ್ಯಕ್ತಪಡಿಸಿವೆ.</p>.<p>ಯಕ್ಷಗಾನದವೇದಿಕೆಯಲ್ಲಿ ಕಲಾವಿದರು ಕೇಂದ್ರ ಸರ್ಕಾರದ ಕೃಷಿ ಕಾಯ್ದೆಯನ್ನು ಉಲ್ಲೇಖಿಸಿ, ‘ಹಲವಾರುತಿಂಗಳುಗಳಿಂದ ಹಸಿರು ಶಾಲು, ಟೊಪ್ಪಿ ಧರಿಸಿ ಹೋರಾಟ ಮಾಡುತ್ತಿರುವವರು ನಿಜವಾದ ರೈತರಲ್ಲ, ನಕಲಿಗಳು. ಅವರು ಆರು ವರ್ಷ ಹೋರಾಟ ನಡೆಸಿದರೂ ಏನೂ ಆಗುವುದಿಲ್ಲ’ ಎಂದು ಹೇಳಿದ್ದಾರೆ.</p>.<p>‘ರೈತರು ರಸ್ತೆಯಲ್ಲಿ ಕುಳಿತಿದ್ದರೆ ನಮಗೆ ಅಕ್ಕಿ ಎಲ್ಲಿಂದ ಸಿಗುತ್ತಿತ್ತು ? ನಿಜವಾದ ರೈತರು ಇನ್ನೂ ಗದ್ದೆಯಲ್ಲೇ ಇದ್ದಾರೆ’ ಎಂದು ಟೀಕಿಸಿದ್ದಾರೆ.</p>.<p><strong>ಖಂಡನೆ: </strong>‘ರೈತರನ್ನು ಅವಮಾನಿಸುವ, ರಾಜಕೀಯ ಪಕ್ಷಗಳ ಪರವಾಗಿ ಮಾತನಾಡುವ ಮಾತುಗಾರಿಕೆಯು ಯಕ್ಷಗಾನದ ಘನತೆಗೆ ಕುಂದು ತರುವಂತಾಗಿದೆ’ ಎಂದು ರೈತ ಸಂಘದ ಮುಖಂಡರು ಖಂಡಿಸಿದ್ದಾರೆ.</p>.<p>‘ರೈತ ಚಳವಳಿಯ ಬಗ್ಗೆ ನಡೆಸುತ್ತಿರುವ ಅಪಪ್ರಚಾರಕ್ಕೆ ಯಕ್ಷಗಾನ ಕಲೆಯನ್ನು ಬಳಸಿಕೊಳ್ಳುತ್ತಿರುವುದು ಖಂಡನೀಯ. ಆ ಮೂಲಕ ಯಕ್ಷಗಾನವನ್ನೂ ಕೆಡಿಸುವ ಹುನ್ನಾರ ಮಾಡುತ್ತಿದ್ದಾರೆ’ ಎಂದು ಕರ್ನಾಟಕ ಪ್ರಾಂತ ಪ್ರದೇಶ ರೈತ ಸಂಘದ ಉಪಾಧ್ಯಕ್ಷ ಯಾದವ ಶೆಟ್ಟಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.</p>.<p>‘ಯಕ್ಷಗಾನದ ಬಗ್ಗೆ ಗೌರವ ಇದೆ. ಆದರೆ,ಜೀವನಾನುಭವ ಇಲ್ಲದವರು ಕಲೆಯ ಮೂಲಕ ಅನ್ನದಾತರನ್ನೇ ಹೀಯಾಳಿಸುವುದು ನೋವು ಉಂಟು ಮಾಡಿದೆ’ ಎಂದು ರಾಜ್ಯ ರೈತ ಸಂಘದ ಪ್ರಧಾನ ಕಾರ್ಯದರ್ಶಿ ರವಿಕಿರಣ್ ಪುಣಚ ಬೇಸರ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>