‘ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ದೇಶದಲ್ಲಿ ರೈತರಿಂದ ಕಡಿಮೆ ಮೊತ್ತಕ್ಕೆ ವಶಪಡಿಸಿಕೊಂಡ ಜಮೀನಿನಲ್ಲಿ ನಿರ್ಮಿಸಿದ ವಿಮಾನ ನಿಲ್ದಾಣ, ರೈಲು ಮಾರ್ಗ ಸೇರಿದಂತೆ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳನ್ನು ಕಾರ್ಪೊರೇಟ್ ಸಂಸ್ಥೆಗಳಿಗೆ ಮಾರಾಟ ಮಾಡುತ್ತಿದ್ದಾರೆ. ಸ್ವಾಮಿನಾಥನ್ ಆರೋಗದ ವರದಿ ಜಾರಿ ಸೇರಿದಂತೆ ರೈತರ ಆದಾಯ ದುಪ್ಪಟ್ಟುಗೊಳಿಸುವ ಭರವಸೆ ಕಡೆಗಣಿಸಿದ ಪರಿಣಾಮ ಸಾಲ ಮನ್ನಾ ಮತ್ತು ಉದ್ಯೋಗ ಸೃಷ್ಟಿಯೂ ಇಲ್ಲದೆ ರೈತರ ಆತ್ಮಹತ್ಯೆ ಪ್ರಕರಣ ಮುಂದುವರಿದಿದೆ’ ಎಂದು ಅವರು ಆರೋಪಿಸಿದರು.