ಬುಧವಾರ ರಾತ್ರಿ ಅಪಾರ್ಟ್ ಮೆಂಟ್ ನಲ್ಲಿ ಕೆಲವರು ದೀಪಾವಳಿ ಆಚರಿಸುತ್ತಿದ್ದ ವೇಳೆ ವಿನಾಯಕ್ ಅವರು ಅಪಾರ್ಟ್ ಮೆಂಟ್ ಕೆಳಗೆ ಹೋಗಿದ್ದರು. ಈ ಸಂದರ್ಭದಲ್ಲಿ ಪಾರ್ಕಿಂಗ್ ಸ್ಥಳದಲ್ಲಿದ್ದ ಕೃಷ್ಣಾನಂದ ಕಿಣಿ ಹಾಗೂ ಅವಿನಾಶ್ ಕಿಣಿ ಅವರೊಂದಿಗೆ ಜಗಳ ಶುರುವಾಗಿದೆ. ಗಲಾಟೆ ಕೇಳಿ ನನ್ನ ಅತ್ತೆಯೂ ಕೆಳಕ್ಕೆ ಹೋಗಿದ್ದು, ಅವರನ್ನು ತಳ್ಳಿ, ಕೃಷ್ಣಾನಂದ ಕಿಣಿ ತಮ್ಮ ಕೈಯಲ್ಲಿದ್ದ ಚೂರಿನಿಂದ ವಿನಾಯಕ ಕಾಮತ್ ಅವರ ಎದೆಗೆ ಚುಚ್ಚಿದ್ದಾರೆ. ಅವರ ಮಗ ಅವಿನಾಶ್ ಕಿಣಿ ಕೂಡ ಕೊಲೆಗೆ ಸಹಕರಿಸಿದ್ದಾರೆ ಎಂದು ತಿಳಿಸಿದ್ದಾರೆ.