ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಳ್ಯ: ಮಗನಿಂದ ಹಲ್ಲೆಗೆ ಒಳಗಾಗಿದ್ದ ತಂದೆ ಆತ್ಮಹತ್ಯೆ

Last Updated 20 ಡಿಸೆಂಬರ್ 2020, 1:02 IST
ಅಕ್ಷರ ಗಾತ್ರ

ಸುಳ್ಯ(ದಕ್ಷಿಣ ಕನ್ನಡ): ಮಗನಿಂದ ಹಲ್ಲೆಗೊಳಗಾಗಿ ಆಸ್ಪತ್ರೆ ಸೇರಿದ್ದ ತಂದೆಯೊಬ್ಬರು ಆಸ್ಪತ್ರೆಯ‌ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಾಸರಗೋಡು ಬಂದ್ಯಡ್ಕದ ಲಕ್ಷ್ಮಣ ಗೌಡ ಆತ್ಮಹತ್ಯೆಗೆ ಶರಣಾದವರು. ಅಪ್ಪ-ಮಗನ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಜಗಳವಾಗಿದ್ದು, ಆಗ ಮಗ ಅಪ್ಪನಿಗೆ ಬಿದಿರಿನ ಸಲಾಕೆಯಿಂದ ಹೊಡೆದಿದ್ದ. ಈ ವೇಳೆ ತೀವ್ರ ಗಾಯಗೊಂಡ ಲಕ್ಷ್ಮಣ ಗೌಡ ಅವರನ್ನು ಸುಳ್ಯದ ಕೆವಿಜಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೇ 18 ರ ರಾತ್ರಿ ಅವರ ಅಳಿಯ ಊಟ ತರಲೆಂದು ಹೋದ ವೇಳೆ ಆಸ್ಪತ್ರೆ ಕಟ್ಟಡದಿಂದ ಹಾರಿದ್ದಾರೆ.

ಈ ವೇಳೆ ಗಂಭೀರ ಗಾಯಗೊಂಡಿದ್ದ ಲಕ್ಷ್ಮಣ ಗೌಡರು ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ. ಮಗನ ಇತ್ತೀಚಿನ ವರ್ತನೆಯಿಂದ ನೊಂದಿದ್ದ ಲಕ್ಷ್ಮಣ ಗೌಡ ಇದೇ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಸುಳ್ಯ ಪೋಲಿಸರು ಅನುಮಾನ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT