ಕಾಸರಗೋಡು ಬಂದ್ಯಡ್ಕದ ಲಕ್ಷ್ಮಣ ಗೌಡ ಆತ್ಮಹತ್ಯೆಗೆ ಶರಣಾದವರು. ಅಪ್ಪ-ಮಗನ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಜಗಳವಾಗಿದ್ದು, ಆಗ ಮಗ ಅಪ್ಪನಿಗೆ ಬಿದಿರಿನ ಸಲಾಕೆಯಿಂದ ಹೊಡೆದಿದ್ದ. ಈ ವೇಳೆ ತೀವ್ರ ಗಾಯಗೊಂಡ ಲಕ್ಷ್ಮಣ ಗೌಡ ಅವರನ್ನು ಸುಳ್ಯದ ಕೆವಿಜಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೇ 18 ರ ರಾತ್ರಿ ಅವರ ಅಳಿಯ ಊಟ ತರಲೆಂದು ಹೋದ ವೇಳೆ ಆಸ್ಪತ್ರೆ ಕಟ್ಟಡದಿಂದ ಹಾರಿದ್ದಾರೆ.