ಪ್ರವಾಸೋದ್ಯಮ ಇಲಾಖೆಯಲ್ಲಿ ಸಹಾಯಕ ನಿರ್ದೇಶಕರಾಗಿ ಉಡುಪಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ,
ಬನವಾಸಿ ಸೋಮಶೇಖರ ಅವರು ಕೊರೊನಾ ಸೋಂಕಿಗೆ ಒಳಗಾಗಿ, ಚಿಕಿತ್ಸೆಗೆ ಸ್ಪಂದಿಸದೆ, ಮೃತಪಟ್ಟು ಎರಡು ವಾರಗಳು ಕಳೆದಿವೆ. ಅಪ್ಪನನ್ನು ಕಳೆದುಕೊಂಡ ನೋವಿನಲ್ಲೇ ಅಮ್ಮ, ತಂಗಿಗೆ ಸಾಂತ್ವನ ಹೇಳುತ್ತ ರಕ್ಷಿತಾ, ಜುಲೈ ಮೂರನೇ ವಾರ ನಡೆಯಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಅಣಿಯಾಗುತ್ತಿದ್ದಾರೆ.