ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಣಕ್ಕಾಗಿ ಬೆದರಿಕೆ: ಆರೋಪಿಯಿಂದ ಕರೆ– ದೂರು

Last Updated 8 ಫೆಬ್ರುವರಿ 2023, 6:53 IST
ಅಕ್ಷರ ಗಾತ್ರ

ಮಂಗಳೂರು: ಸುರತ್ಕಲ್‌ನಲ್ಲಿ ಕೆಲ ತಿಂಗಳ ಹಿಂದೆ ನಡೆದ ಫಾಝಿಲ್‌ ಹತ್ಯೆ ಆರೋಪಿಗಳು ಜೈಲಿನಲ್ಲಿದ್ದು, ಅವರಿಗೆ ನೆರವು ನೀಡುವಂತೆ ವ್ಯಕ್ತಿಯೊಬ್ಬ ಕರೆ ಮಾಡಿರುವ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಸೋಮವಾರ ಎಫ್‌ಐಆರ್‌ ದಾಖಲಾಗಿದೆ.

‘ಫೆ. 2ರಂದು ಬೆಳಿಗ್ಗೆ 11.40ರ ಸಮಯದಲ್ಲಿ ನಾನು ಕೋಟೆಕಾರ್ ಗ್ರಾಮದ ಮಾಡೂರು ಸೊವುರ್ ಎಂಬಲ್ಲಿ ಇದ್ದಾಗ ಹರ್ಷಿತ್ ಎಂಬಾತ ಮೊಬೈಲ್‌ನಿಂದ ಕರೆ ಮಾಡಿದ್ದ. ‘ಸುರತ್ಕಲ್‌ನಲ್ಲಿ ಫಾಝಿಲ್ ಎಂಬಾತನನ್ನು ಕೊಲೆ ಮಾಡಿ ಜೈಲಿಗೆ ಹೋಗಿ ಜಾಮೀನಿನಲ್ಲಿ ಹೊರಗೆ ಬಂದಿದ್ದೇನೆ. ನನಗೆ ಮತ್ತು ಜೈಲಿನೊಳಗೆ ಇರುವವರಿಗೆ ನೀವು ಹಣದ ಸಹಾಯ ಮಾಡಬೇಕು’ ಕೇಳಿದ್ದ. ‘ಮುಂದೆ ಸಮಸ್ಯೆಯಾದರೆ ನಮ್ಮನ್ನು ದೂರ ಬೇಡಿ’ ಎಂದು ಹೆದರಿಸಿದ್ದ’ ಎಂದು ವ್ಯಕ್ತಿಯೊಬ್ಬರು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

‘ಈ ವ್ಯಕ್ತಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ದೂರು ನೀಡಿರುವ ವ್ಯಕ್ತಿ ಕೋರಿದ್ದಾರೆ’ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT