ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾಖಲೆಯ ಕಂಬಳ ಓಟಗಾರರಿಗೆ ಸನ್ಮಾನ

Last Updated 12 ಫೆಬ್ರುವರಿ 2021, 16:58 IST
ಅಕ್ಷರ ಗಾತ್ರ

ಮಂಗಳೂರು: ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ಕಂಬಳದ ದಾಖಲೆಯ ಓಟಗಾರರಾದ ಶ್ರೀನಿವಾಸ ಗೌಡ, ವಿಶ್ವನಾಥ ದೇವಾಡಿಗ ಅವರನ್ನು ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್ ನೇತೃತ್ವದಲ್ಲಿ ಶುಕ್ರವಾರ ಸನ್ಮಾನಿಸಲಾಯಿತು.

ಕಂಬಳದ ಗದ್ದೆಯಲ್ಲಿ ಓಡುವ ಓಟಗಾರರಿಗೆ ಸೂಕ್ತ ಪ್ರೋತ್ಸಾಹದ ಅಗತ್ಯವಿದೆ. ಈ ನಿಟ್ಟಿನಲ್ಲಿ ಅವರನ್ನು ಗೌರವಿಸಲಾಗುತ್ತಿದೆ. ಕಂಬಳ ಕ್ರೀಡೆಗೂ ಪ್ರೋತ್ಸಾಹ ನೀಡಲಾಗುತ್ತಿದ್ದು, ಅವರು ಇನ್ನಷ್ಟು ಸಾಧನೆ ಮಾಡುವಂತಾಗಲಿ ಎಂದು ರಾಜೇಂದ್ರ ಕುಮಾರ್ ಹೇಳಿದರು.

ಕಂಬಳ ಗದ್ದೆಯಲ್ಲಿ ವಿಶ್ವನಾಥ ದೇವಾಡಿಗ (9.15 ಸೆ. ನೂರು ಮೀ.ಓಟ) ಮತ್ತು ಶ್ರೀನಿವಾಸ ದೇವಾಡಿಗ (9.31 ಸೆ.) ದಾಖಲೆ ನಿರ್ಮಿಸಿದ್ದಾರೆ. ರಾಜ್ಯ ಕ್ರೀಡಾ ಪ್ರಾಧಿಕಾರದ ಮೂಲಕ ಕ್ರೀಡಾರತ್ನ ಪ್ರಶಸ್ತಿಯನ್ನು ನೀಡುತ್ತಿರುವುದು ಶ್ಲಾಘನೀಯ ಎಂದು ಕಂಬಳ ಕ್ರೀಡಾ ಅಕಾಡೆಮಿ ಅಧ್ಯಕ್ಷ ಗುಣಪಾಲ ಕದಂಬ ತಿಳಿಸಿದರು.

ಕಂಬಳ ಸಮಿತಿಯ ಸಂಘಟಕರಾದ ಬಿ.ಆರ್.ಶೆಟ್ಟಿ, ಸಂತೋಷ್ ಶೆಟ್ಟಿ ಬೋಳಗುತ್ತು, ವೆಂಕಟ ಪೂಜಾರಿ, ವಿಜಯ ಕುಮಾರ್, ಎಸ್‌ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್, ಹಾಲು ಒಕ್ಕೂಟದ ಉಪಾಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT