<p>ಮಂಗಳೂರು: ಸಪ್ತಕ ಬೆಂಗಳೂರು, ಚಿರಂತನ ಚಾರಿಟಬಲ್ ಟ್ರಸ್ಟ್ ಸುರತ್ಕಲ್, ರಾಮಕೃಷ್ಣ ಮಠದ<br />ವತಿಯಿಂದ ತಬಲಾ ವಾದಕ ಪಂಡಿತ್ ಓಂಕಾರ್ ಗುಲ್ವಾಡಿ ಅವರ 80ನೇ ಜನ್ಮ ಸಂವತ್ಸರದ ಆಚರಣೆಯ ಸಂಭ್ರಮ ಹಾಗೂ ಸಂಗೀತ ಸನ್ಮಾನ ಕಾರ್ಯಕ್ರಮವು ಏ.13ರಂದು ಸಂಜೆ 5ಕ್ಕೆ ನಗರದ ರಾಮಕೃಷ್ಣ ಮಠದ ವಿವೇಕಾನಂದ ಸಭಾಂಗಣದಲ್ಲಿ ನಡೆಯಲಿದೆ.</p>.<p>ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಚಿರಂತನ ಚಾರಿಟಬಲ್ ಟ್ರಸ್ಟ್ ವ್ಯವಸ್ಥಾಪಕ ನಿರ್ದೇಶಕ ಭಾರವಿ ದೇರಾಜೆ, ಸಿತಾರ್ ವಾದಕ ಅಂಕುಶ್ ನಾಯಕ್ ಹಾಗೂ ಬಾನ್ಸುರಿ ಕಲಾವಿದ ಕಾರ್ತಿಕ್ ಭಟ್ ಅವರ ಸಿತಾರ್- ಬಾನ್ಸುರಿ ಜುಗಲ್ಬಂದಿ ಕಛೇರಿಯೊಂದಿಗೆ ಕಾರ್ಯಕ್ರಮ ಆರಂಭವಾಗಲಿದೆ. ತಬಲಾವಾದಕ ಹೇಮಂತ್ ಜೋಶಿ ಸಾಥ್ ನೀಡುವರು ಎಂದರು.</p>.<p>ಮಂಗಳೂರಿನ ಓಂಕಾರ್ ಗುಲ್ವಾಡಿ ಅವರಿಗೆ ಗೌರವಾರ್ಪಣೆ ಪಂ. ವೆಂಕಟೇಶ ಕುಮಾರ್ ಅಧ್ಯಕ್ಷತೆಯಲ್ಲಿ ನಡೆಯಲಿದೆ. ವಿವಿಧ ಸಂಸ್ಥೆಗಳು ಓಂಕಾರ್ ಗುಲ್ವಾಡಿ ಅವರನ್ನು ಸನ್ಮಾನಿಸಲಿವೆ ಎಂದರು.</p>.<p>ನಂತರ ವೆಂಕಟೇಶ ಕುಮಾರ್ ಅವರ ಶಾಸ್ತ್ರೀಯ ಸಂಗೀತ ಕಛೇರಿ ನಡೆಯಲಿದೆ. ಓಂಕಾರ್ ಗುಲ್ವಾಡಿ ತಬಲಾ ಹಾಗೂ ಪಂ. ಸುಧೀರ್ ನಾಯಕ್ ಸಂವಾದಿನಿಯಲ್ಲಿ ಸಾಥ್ ನೀಡುವರು ಎಂದು ತಿಳಿಸಿದರು. ಧ್ಯಾನ್ ಸಂಗೀತ್ ಅಕಾಡೆಮಿ ಸ್ಥಾಪಕ ಅಮಿತ್ ಕುಮಾರ್ ಬೆಂಗ್ರೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಂಗಳೂರು: ಸಪ್ತಕ ಬೆಂಗಳೂರು, ಚಿರಂತನ ಚಾರಿಟಬಲ್ ಟ್ರಸ್ಟ್ ಸುರತ್ಕಲ್, ರಾಮಕೃಷ್ಣ ಮಠದ<br />ವತಿಯಿಂದ ತಬಲಾ ವಾದಕ ಪಂಡಿತ್ ಓಂಕಾರ್ ಗುಲ್ವಾಡಿ ಅವರ 80ನೇ ಜನ್ಮ ಸಂವತ್ಸರದ ಆಚರಣೆಯ ಸಂಭ್ರಮ ಹಾಗೂ ಸಂಗೀತ ಸನ್ಮಾನ ಕಾರ್ಯಕ್ರಮವು ಏ.13ರಂದು ಸಂಜೆ 5ಕ್ಕೆ ನಗರದ ರಾಮಕೃಷ್ಣ ಮಠದ ವಿವೇಕಾನಂದ ಸಭಾಂಗಣದಲ್ಲಿ ನಡೆಯಲಿದೆ.</p>.<p>ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಚಿರಂತನ ಚಾರಿಟಬಲ್ ಟ್ರಸ್ಟ್ ವ್ಯವಸ್ಥಾಪಕ ನಿರ್ದೇಶಕ ಭಾರವಿ ದೇರಾಜೆ, ಸಿತಾರ್ ವಾದಕ ಅಂಕುಶ್ ನಾಯಕ್ ಹಾಗೂ ಬಾನ್ಸುರಿ ಕಲಾವಿದ ಕಾರ್ತಿಕ್ ಭಟ್ ಅವರ ಸಿತಾರ್- ಬಾನ್ಸುರಿ ಜುಗಲ್ಬಂದಿ ಕಛೇರಿಯೊಂದಿಗೆ ಕಾರ್ಯಕ್ರಮ ಆರಂಭವಾಗಲಿದೆ. ತಬಲಾವಾದಕ ಹೇಮಂತ್ ಜೋಶಿ ಸಾಥ್ ನೀಡುವರು ಎಂದರು.</p>.<p>ಮಂಗಳೂರಿನ ಓಂಕಾರ್ ಗುಲ್ವಾಡಿ ಅವರಿಗೆ ಗೌರವಾರ್ಪಣೆ ಪಂ. ವೆಂಕಟೇಶ ಕುಮಾರ್ ಅಧ್ಯಕ್ಷತೆಯಲ್ಲಿ ನಡೆಯಲಿದೆ. ವಿವಿಧ ಸಂಸ್ಥೆಗಳು ಓಂಕಾರ್ ಗುಲ್ವಾಡಿ ಅವರನ್ನು ಸನ್ಮಾನಿಸಲಿವೆ ಎಂದರು.</p>.<p>ನಂತರ ವೆಂಕಟೇಶ ಕುಮಾರ್ ಅವರ ಶಾಸ್ತ್ರೀಯ ಸಂಗೀತ ಕಛೇರಿ ನಡೆಯಲಿದೆ. ಓಂಕಾರ್ ಗುಲ್ವಾಡಿ ತಬಲಾ ಹಾಗೂ ಪಂ. ಸುಧೀರ್ ನಾಯಕ್ ಸಂವಾದಿನಿಯಲ್ಲಿ ಸಾಥ್ ನೀಡುವರು ಎಂದು ತಿಳಿಸಿದರು. ಧ್ಯಾನ್ ಸಂಗೀತ್ ಅಕಾಡೆಮಿ ಸ್ಥಾಪಕ ಅಮಿತ್ ಕುಮಾರ್ ಬೆಂಗ್ರೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>