<p><strong>ಮಂಗಳೂರು</strong>: ಕಚೇರಿ ಸಿಬ್ಬಂದಿ ದಕ್ಷ ಹಾಗೂ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಬೇಕು. ಅದರಲ್ಲೂ ಬ್ಯಾಂಕ್ ಸಿಬ್ಬಂದಿ ಸೇವೆ ಇತರರಿಗೆ ಮಾದರಿಯಾಗಿರಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್ ಹೇಳಿದರು.</p>.<p>ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನ ಉಪ ಮಹಾಪ್ರಬಂಧಕ ಜೆ. ಜೀವನ್ ಶೆಟ್ಟಿ, ಹಿರಿಯ ನಿರೀಕ್ಷಕಿ ಸಂಧ್ಯಾ ಹಾಗೂ ಸಿಬ್ಬಂದಿ ಕೊರಗಪ್ಪ ನಾಯ್ಕ್ ನಿವೃತ್ತರಾದ ಹಿನ್ನಲೆಯಲ್ಲಿ ಬ್ಯಾಂಕ್ನ ಸಭಾಂಗಣದಲ್ಲಿ ನಡೆದ ಬೀಳ್ಕೊಡುಗೆ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>ನಿವೃತ್ತರಾದವರಿಗೆ ಶಾಲು, ಹಾರ, ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು. ಬ್ಯಾಂಕ್ ನೌಕರರ ಒಕ್ಕೂಟದಿಂದಲೂ ಈ ಮೂವರಿಗೆ ಅಭಿನಂದನೆ ಸಲ್ಲಿಸಲಾಯಿತು.</p>.<p> ಬ್ಯಾಂಕ್ ಉಪಾಧ್ಯಕ್ಷರಾದ ವಿನಯಕುಮಾರ್ ಸೂರಿಂಜೆ, ನಿರ್ದೆಶಕರಾದ ಶಶಿಕುಮಾರ್ ರೈ ಬಾಲ್ಯೋಟ್ಟು, ದೇವಿಪ್ರಸಾದ್ ಶೆಟ್ಟಿ ಬೆಳಪು, ಎಸ್.ಬಿ.ಜಯರಾಮ್ ರೈ , ಮೋನಪ್ಪ ಶೆಟ್ಟಿ ಎಕ್ಕಾರು, ಕೆ. ಜೈರಾಜ್ ಬಿ ರೈ, ಹರಿಶ್ಚಂದ್ರ, ಕುಶಾಲಪ್ಪ ಗೌಡ ಹಾಗೂ ಅಧಿಕಾರಿಗಳು ಇದ್ದರು. ಉಪಮಹಾಪ್ರಬಂಧಕ ನಿತ್ಯಾನಂದ ಸೇರಿಗಾರ್ ಸ್ವಾಗತಿಸಿ, ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ಕಚೇರಿ ಸಿಬ್ಬಂದಿ ದಕ್ಷ ಹಾಗೂ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಬೇಕು. ಅದರಲ್ಲೂ ಬ್ಯಾಂಕ್ ಸಿಬ್ಬಂದಿ ಸೇವೆ ಇತರರಿಗೆ ಮಾದರಿಯಾಗಿರಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್ ಹೇಳಿದರು.</p>.<p>ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನ ಉಪ ಮಹಾಪ್ರಬಂಧಕ ಜೆ. ಜೀವನ್ ಶೆಟ್ಟಿ, ಹಿರಿಯ ನಿರೀಕ್ಷಕಿ ಸಂಧ್ಯಾ ಹಾಗೂ ಸಿಬ್ಬಂದಿ ಕೊರಗಪ್ಪ ನಾಯ್ಕ್ ನಿವೃತ್ತರಾದ ಹಿನ್ನಲೆಯಲ್ಲಿ ಬ್ಯಾಂಕ್ನ ಸಭಾಂಗಣದಲ್ಲಿ ನಡೆದ ಬೀಳ್ಕೊಡುಗೆ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>ನಿವೃತ್ತರಾದವರಿಗೆ ಶಾಲು, ಹಾರ, ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು. ಬ್ಯಾಂಕ್ ನೌಕರರ ಒಕ್ಕೂಟದಿಂದಲೂ ಈ ಮೂವರಿಗೆ ಅಭಿನಂದನೆ ಸಲ್ಲಿಸಲಾಯಿತು.</p>.<p> ಬ್ಯಾಂಕ್ ಉಪಾಧ್ಯಕ್ಷರಾದ ವಿನಯಕುಮಾರ್ ಸೂರಿಂಜೆ, ನಿರ್ದೆಶಕರಾದ ಶಶಿಕುಮಾರ್ ರೈ ಬಾಲ್ಯೋಟ್ಟು, ದೇವಿಪ್ರಸಾದ್ ಶೆಟ್ಟಿ ಬೆಳಪು, ಎಸ್.ಬಿ.ಜಯರಾಮ್ ರೈ , ಮೋನಪ್ಪ ಶೆಟ್ಟಿ ಎಕ್ಕಾರು, ಕೆ. ಜೈರಾಜ್ ಬಿ ರೈ, ಹರಿಶ್ಚಂದ್ರ, ಕುಶಾಲಪ್ಪ ಗೌಡ ಹಾಗೂ ಅಧಿಕಾರಿಗಳು ಇದ್ದರು. ಉಪಮಹಾಪ್ರಬಂಧಕ ನಿತ್ಯಾನಂದ ಸೇರಿಗಾರ್ ಸ್ವಾಗತಿಸಿ, ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>