ನಾಡಿನೆಲ್ಲೆಡೆಯಿಂದ ಭಕ್ತರು ಲಕ್ಷ ದೀಪೋತ್ಸವಕ್ಕೆ ಪಾದಯಾತ್ರೆಯಲ್ಲಿ ಬಂದು ಸೇವೆ ಮಾಡುತ್ತಾರೆ. ರೈತರು ತಾವು ಬೆಳೆದ ತರಕಾರಿ, ಹಣ್ಣುಹಂಪಲು, ಧಾನ್ಯಗಳನ್ನು ಅನ್ನದಾನಕ್ಕಾಗಿ ವಿನಿಯೋಗಿಸಲು ಕಾಣಿಕೆಯಾಗಿ ತಂದು ಅರ್ಪಿಸುತ್ತಾರೆ. ಬೆಂಗಳೂರಿನ ಹೂವಿನ ವ್ಯಾಪಾರಿಗಳು ವಿವಿಧ ಹೂಗಳಿಂದ ಕ್ಷೇತ್ರವನ್ನು ಅಲಂಕರಿಸಿ ಸೇವೆ ಸಲ್ಲಿಸುತ್ತಿದ್ದಾರೆ. ಧರ್ಮಸ್ಥಳದ ದೇವಸ್ಥಾನ, ಬೀಡು, ವಸತಿಛತ್ರಗಳು, ಉದ್ಯಾನ, ಪ್ರವೇಶದ್ವಾರ, ಬಾಹುಬಲಿ ಬೆಟ್ಟವನ್ನು ವಿದ್ಯುದ್ದೀಪಗಳಿಂದ ಅಲಂಕರಿಸಲಾಗಿದೆ.