ಉಪ್ಪಿನಂಗಡಿ: ಇಲ್ಲಿನ ಬಸ್ ನಿಲ್ದಾಣ ಪರಿಸರದಲ್ಲಿ ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಕ್ಷುಲ್ಲಕ ಕಾರಣಕ್ಕೆ ಹೊಡೆದಾಟ ನಡೆದಿದ್ದು, 8 ಮಂದಿ ವಿದ್ಯಾರ್ಥಿಗಳ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ಸಂಘರ್ಷ ನಿರತ ವಿದ್ಯಾರ್ಥಿಗಳ ಗುಂಪನ್ನು ಕರ್ತವ್ಯದಲ್ಲಿದ್ದ ಪೊಲೀಸರು ಸಮಾಧಾನ ಪಡಿಸಿ ಚದುರಿಸಲು ಯತ್ನಿಸಿದರೂ, ಅದನ್ನು ಲೆಕ್ಕಿಸದೆ ಹೊಡೆದಾಟದಲ್ಲಿ ತೊಡಗಿದ್ದರು.
ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಾದ ಗಿರೀಶ್, ಅಭಿಷಿತ್, ಧನುಷ್, ಮೋಹನ್, ನಂದನ್, ವಿನ್ಯಾಸ್, ರೂಪೇಶ್, ಹಿತೇಶ್ ಎಂಬುವರನ್ನು ವಶಕ್ಕೆ ಪಡೆದು ಅವರ ವಿರುದ್ದ ಸಾರ್ವಜನಿಕ ಶಾಂತಿಭಂಗದ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ.