<p><strong>ಬದಿಯಡ್ಕ</strong>: ಮುಳ್ಳೇರಿಯದ ಕಾರಡ್ಕ ಅಗ್ರಿಕಲ್ಚರಿಸ್ಟ್ ವೆಲ್ಫೇರ್ ಕೊ–ಆಪರೇಟಿವ್ ಸೊಸೈಟಿಯ ಕಾರ್ಯದರ್ಶಿ ಕೆ.ರತೀಶ್ ಅವರು ಈಡಿನ ಚಿನ್ನಾಭರಣ ವಂಚಿಸಿ ಸೋಮವಾರದಿಂದ ನಾಪತ್ತೆಯಾಗಿರುವುದಾಗಿ ಆದೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<p>ಬ್ಯಾಂಕ್ ಅಧ್ಯಕ್ಷ ಬೆಳ್ಳೂರು ನಾಟೆಕಲ್ಲಿನ ಸೂಫಿ ಅವರು ನೀಡಿದ ದೂರಿನಂತೆ ಪ್ರಕರಣ ದಾಖಲಿಸಲಾಗಿದೆ. ಪ್ರಕರಣದಲ್ಲಿ ಸುಮಾರು ₹ 4.75 ಕೋಟಿ ವಂಚನೆಯನ್ನು ಪತ್ತೆಹಚ್ಚಲಾಗಿದೆ. ರತೀಶ್ ಅವರು ಸಿಪಿಎಂ ಮುಳ್ಳೇರಿಯ ವಲಯ ಸಮಿತಿಯ ಸದಸ್ಯರಾಗಿದ್ದು, ಕರ್ಮಂತೋಡಿಯ ನಿವಾಸಿಯಾಗಿದ್ದಾರೆ. ಸೊಸೈಟಿಯ ಸದಸ್ಯರ ಹೆಸರಲ್ಲಿ, ಅವರಿಗೆ ತಿಳಿಯದಂತೆ ಸುಮಾರು ₹ 7 ಲಕ್ಷದ ವರೆಗೆ ಪ್ರತಿ ಸದಸ್ಯರ ಹೆಸರಿನಲ್ಲಿ ಸಾಲ ತೆಗೆದುಕೊಂಡಿದ್ದು, ಮಾರ್ಚ್ ತಿಂಗಳಲ್ಲಿ ವಾರ್ಷಿಕ ಲೆಕ್ಕ ಪರಿಶೋಧಕರು ಬಂದಾಗ, ಈ ಅವ್ಯವಹಾರ ನಡೆದಿರುವುದು ಗೊತ್ತಾಗಿದೆ. ಒಂದು ತಿಂಗಳಲ್ಲಿ ಎಲ್ಲವನ್ನೂ ಸರಿಪಡಿಸಲಾಗುವುದು ಎಂದು ರತೀಶ್ ತಿಳಿಸಿದ್ದರು ಎನ್ನಲಾಗಿದೆ.</p>.<p>ಈ ಬಗ್ಗೆ ನಾಟೆಕಲ್ಲಿನ ಸೂಫಿ ಅವರು ಪೊಲೀಸರಿಗೆ ದೂರು ನೀಡಿದ ತಕ್ಷಣ ರತೀಶ್ ನಾಪತ್ತೆಯಾಗಿದ್ದಾರೆ. ಪ್ರಕರಣ ಗೊತ್ತಾಗುತ್ತಿದ್ದಂತೆ ರತೀಶ್ ಅವರು ಅವ್ಯವಹಾರ ಸರಿಪಡಿಸುವುದಾಗಿ ಅನೇಕರಲ್ಲಿ ಹೇಳಿದ್ದರು ಎನ್ನಲಾಗಿದ್ದು, ಇದೀಗ ಸೈಬರ್ ಸೆಲ್ ಮೂಲಕ ಹುಡುಕಾಟ ನಡೆಸಿದಾಗ, ರತೀಶ್ ಬೆಂಗಳೂರಿಗೆ ತಲುಪಿರಬಹುದು ಎನ್ನಲಾಗಿದೆ. ಈ ಬಗ್ಗೆ ತನಿಖೆ ಮುಂದುವರಿದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬದಿಯಡ್ಕ</strong>: ಮುಳ್ಳೇರಿಯದ ಕಾರಡ್ಕ ಅಗ್ರಿಕಲ್ಚರಿಸ್ಟ್ ವೆಲ್ಫೇರ್ ಕೊ–ಆಪರೇಟಿವ್ ಸೊಸೈಟಿಯ ಕಾರ್ಯದರ್ಶಿ ಕೆ.ರತೀಶ್ ಅವರು ಈಡಿನ ಚಿನ್ನಾಭರಣ ವಂಚಿಸಿ ಸೋಮವಾರದಿಂದ ನಾಪತ್ತೆಯಾಗಿರುವುದಾಗಿ ಆದೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<p>ಬ್ಯಾಂಕ್ ಅಧ್ಯಕ್ಷ ಬೆಳ್ಳೂರು ನಾಟೆಕಲ್ಲಿನ ಸೂಫಿ ಅವರು ನೀಡಿದ ದೂರಿನಂತೆ ಪ್ರಕರಣ ದಾಖಲಿಸಲಾಗಿದೆ. ಪ್ರಕರಣದಲ್ಲಿ ಸುಮಾರು ₹ 4.75 ಕೋಟಿ ವಂಚನೆಯನ್ನು ಪತ್ತೆಹಚ್ಚಲಾಗಿದೆ. ರತೀಶ್ ಅವರು ಸಿಪಿಎಂ ಮುಳ್ಳೇರಿಯ ವಲಯ ಸಮಿತಿಯ ಸದಸ್ಯರಾಗಿದ್ದು, ಕರ್ಮಂತೋಡಿಯ ನಿವಾಸಿಯಾಗಿದ್ದಾರೆ. ಸೊಸೈಟಿಯ ಸದಸ್ಯರ ಹೆಸರಲ್ಲಿ, ಅವರಿಗೆ ತಿಳಿಯದಂತೆ ಸುಮಾರು ₹ 7 ಲಕ್ಷದ ವರೆಗೆ ಪ್ರತಿ ಸದಸ್ಯರ ಹೆಸರಿನಲ್ಲಿ ಸಾಲ ತೆಗೆದುಕೊಂಡಿದ್ದು, ಮಾರ್ಚ್ ತಿಂಗಳಲ್ಲಿ ವಾರ್ಷಿಕ ಲೆಕ್ಕ ಪರಿಶೋಧಕರು ಬಂದಾಗ, ಈ ಅವ್ಯವಹಾರ ನಡೆದಿರುವುದು ಗೊತ್ತಾಗಿದೆ. ಒಂದು ತಿಂಗಳಲ್ಲಿ ಎಲ್ಲವನ್ನೂ ಸರಿಪಡಿಸಲಾಗುವುದು ಎಂದು ರತೀಶ್ ತಿಳಿಸಿದ್ದರು ಎನ್ನಲಾಗಿದೆ.</p>.<p>ಈ ಬಗ್ಗೆ ನಾಟೆಕಲ್ಲಿನ ಸೂಫಿ ಅವರು ಪೊಲೀಸರಿಗೆ ದೂರು ನೀಡಿದ ತಕ್ಷಣ ರತೀಶ್ ನಾಪತ್ತೆಯಾಗಿದ್ದಾರೆ. ಪ್ರಕರಣ ಗೊತ್ತಾಗುತ್ತಿದ್ದಂತೆ ರತೀಶ್ ಅವರು ಅವ್ಯವಹಾರ ಸರಿಪಡಿಸುವುದಾಗಿ ಅನೇಕರಲ್ಲಿ ಹೇಳಿದ್ದರು ಎನ್ನಲಾಗಿದ್ದು, ಇದೀಗ ಸೈಬರ್ ಸೆಲ್ ಮೂಲಕ ಹುಡುಕಾಟ ನಡೆಸಿದಾಗ, ರತೀಶ್ ಬೆಂಗಳೂರಿಗೆ ತಲುಪಿರಬಹುದು ಎನ್ನಲಾಗಿದೆ. ಈ ಬಗ್ಗೆ ತನಿಖೆ ಮುಂದುವರಿದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>