ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರಿ ನೌಕರರ ಮುಷ್ಕರ:ಪ್ರಥಮ ಪಿ.ಯು ಪರೀಕ್ಷೆ– ಗೊಂದಲ

Last Updated 1 ಮಾರ್ಚ್ 2023, 4:59 IST
ಅಕ್ಷರ ಗಾತ್ರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಪಿ.ಯು ಪರೀಕ್ಷೆಗಳು ನಡೆಯುತ್ತಿದ್ದು, ಸರ್ಕಾರಿ ನೌಕರರ ಮುಷ್ಕರದಿಂದಾಗಿ ಪರೀಕ್ಷೆಗಳು ಸಾಂಗವಾಗಿ ನಡೆಯುವುದು ಅನುಮಾನ.

‘ಸರ್ಕಾರಿ ನೌಕರರ ಮುಷ್ಕರದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರೂ ಬುಧವಾರ ಭಾಗವಹಿಸಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಪ್ರಥಮ ಪಿ.ಯು ಪರೀಕ್ಷೆ ನಿಗದಿಯಾಗಿಲ್ಲ. ಗಣಿತ ಮತ್ತು ಅಕೌಂಟನ್ಸಿ ಪರೀಕ್ಷೆಗಳು ಗುರುವಾರ ನಿಗದಿಯಾಗಿವೆ. ಒಂದು ವೇಳೆ ಸರ್ಕಾರವು ನೌಕರರ ಬೇಡಿಕೆಗಳಿಗೆ ಒಪ್ಪದೇ ಹೋದರೆ ಮುಷ್ಕರ ಗುರುವಾರವೂ ಮುಂದುವರಿಯಲಿದೆ’ ಎಂದು ದಕ್ಷಿಣ ಕನ್ನಡ ಜಿಲ್ಲಾ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರ ಸಂಘದ ಅಧ್ಯಕ್ಷ ಕೆ.ಎನ್‌.ಗಂಗಾಧರ ಆಳ್ವ ಅವರು ‘ಪ್ರಜಾವಾಣಿ‘ಗೆ ತಿಳಿಸಿದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರ್ಕಾರಿ ಶಾಲೆಗಳ ಅಧ್ಯಾಪಕರು, ‘ಬುಧವಾರ ತರಗತಿಗಳು ನಡೆಯುವುದಿಲ್ಲ’ ಎಂದು ವಿದ್ಯಾರ್ಥಿಗಳಿಗೆ ಸೂಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT