‘ಸರ್ಕಾರಿ ನೌಕರರ ಮುಷ್ಕರದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರೂ ಬುಧವಾರ ಭಾಗವಹಿಸಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಪ್ರಥಮ ಪಿ.ಯು ಪರೀಕ್ಷೆ ನಿಗದಿಯಾಗಿಲ್ಲ. ಗಣಿತ ಮತ್ತು ಅಕೌಂಟನ್ಸಿ ಪರೀಕ್ಷೆಗಳು ಗುರುವಾರ ನಿಗದಿಯಾಗಿವೆ. ಒಂದು ವೇಳೆ ಸರ್ಕಾರವು ನೌಕರರ ಬೇಡಿಕೆಗಳಿಗೆ ಒಪ್ಪದೇ ಹೋದರೆ ಮುಷ್ಕರ ಗುರುವಾರವೂ ಮುಂದುವರಿಯಲಿದೆ’ ಎಂದು ದಕ್ಷಿಣ ಕನ್ನಡ ಜಿಲ್ಲಾ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರ ಸಂಘದ ಅಧ್ಯಕ್ಷ ಕೆ.ಎನ್.ಗಂಗಾಧರ ಆಳ್ವ ಅವರು ‘ಪ್ರಜಾವಾಣಿ‘ಗೆ ತಿಳಿಸಿದರು.