ದುರ್ನಾತದಿಂದ ಆ ಪರಿಸರಕ್ಕೆ ಹೋಗದಂತಹ ಸ್ಥಿತಿ ನಿರ್ಮಾಣವಾಗಿದ್ದು, ರೋಗ ಹರಡುವ ಭೀತಿ ಎದುರಾಗಿದೆ. ಪರಿಸರದ ಸುತ್ತಮುತ್ತಲಿನ ಜನ ಭಯಬೀತರಾಗಿದ್ದಾರೆ. ಪ್ರಾಣಿ, ಪಕ್ಷಿಗಳು ಈ ವಿಷ ನೀರನ್ನೇ ಕುಡಿಯುತ್ತಿದ್ದು, ಅವುಗಳು ಸಾಯುವ ಸ್ಥಿತಿ ನಿರ್ಮಾಣವಾಗಿದೆ. ಸತ್ತು ಬಿದ್ದಿರುವ ವಿಷಯುಕ್ತ ಮೀನುಗಳನ್ನು ಕೆಲವು ಹಕ್ಕಿಗಳು ತಿನ್ನುತ್ತಿದ್ದು, ಅವುಗಳೂ ಕೂಡ ಸಾಯುವ ಸಂಶಯ ವ್ಯಕ್ತವಾಗುತ್ತಿದೆ.