ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ರೇನ್‌ಗೆ ಮೀನುಗಾರನನ್ನು ತಲೆಕೆಳಗಾಗಿ ಕಟ್ಟಿ ಹಿಂಸೆ, ಕೊಲೆಯತ್ನ‌ ಕೇಸ್‌ ದಾಖಲು

Last Updated 23 ಡಿಸೆಂಬರ್ 2021, 6:09 IST
ಅಕ್ಷರ ಗಾತ್ರ

ಮಂಗಳೂರು: ನಗರದ ಹಳೆಯ ಬಂದರು‌ ದಕ್ಕೆಯಲ್ಲಿ ಮೀನುಗಾರನನ್ನು ಬೋಟ್‌ನ ಕ್ರೇನ್‌ಗೆ ಕಾಲು ಕಟ್ಟಿ ತಲೆಕೆಳಗೆ ತೂಗು ಹಾಕಿ ಸಹ ಕಾರ್ಮಿಕರು ದೌರ್ಜನ್ಯ ಎಸಗಿದ್ದಾರೆ.

ದೌರ್ಜನ್ಯಕ್ಕೆ ಒಳಗಾದ ವ್ಯಕ್ತಿಯನ್ನು ಆಂಧ್ರಪ್ರದೇಶದ ಬೆಸ್ತ ಸಮುದಾಯದ ವೈಲ ಶೀನು ಎಂದು ಗುರುತಿಸಲಾಗಿದೆ. ಈತನನ್ನು ಇತರ ಮೀನುಗಾರ ಕಾರ್ಮಿಕರು ಬೋಟ್‌ನ ಕ್ರೇನ್‌ಗೆ ಕಾಲು ಕಟ್ಟಿ ತಲೆಕೆಳಗಾಗಿ ತೂಗು ಹಾಕಿ ‌ಹಿಂಸಿಸುತ್ತಿರುವ ಹಾಗೂ ಹೊಡೆಯುವಂತೆ ಪ್ರೇರೇಪಿಸುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಮೊಬೈಲ್ ಕಳವು‌ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ರೀತಿಯಾಗಿ ತೂಗು ಹಾಕಿದ್ದರು ಎಂದು ಪೊಲೀಸರ ಪ್ರಾಥಮಿಕ ವಿಚಾರಣೆಯಿಂದ ಮಾಹಿತಿ ತಿಳಿಸಿದೆ.

ಈ ಘಟನೆ ಕೆಲ ದಿನಗಳ ಹಿಂದೆ ನಡೆದಿದ್ದು, ದೌರ್ಜನ್ಯ ಎಸಗಿದ ಆರೋಪಿಗಳ ವಿರುದ್ಧ ಪಾಂಡೇಶ್ವರ ಠಾಣೆಯಲ್ಲಿ ಪೊಲೀಸರು ಕೊಲೆಯತ್ನ ಪ್ರಕರಣ ದಾಖಲಿಸಿಕೊಂಡಿದ್ದಾರೆ. ತನಿಖೆ ಆರಂಭಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ಎನ್.‌ಶಶಿಕುಮಾರ್ ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT