ಏ.11ರಂದು ಬೆಳಿಗ್ಗೆ 10 ಗಂಟೆಗೆ ಕೇರಳದ ಬೇಪೂರ್ನಿಂದ ಹೊರಟ ಮೀನುಗಾರಿಕೆಯ ಈ ಬೋಟ್, ಸೋಮವಾರ ತಡರಾತ್ರಿ 2 ಗಂಟೆಗೆ ಸಿಂಗಪುರದ ಎಪಿಎಲ್ ಲೇ ಹ್ಯಾವ್ರೆ ಎನ್ನುವ ಹಡಗಿಗೆ ಡಿಕ್ಕಿ ಹೊಡೆದಿತ್ತು. ಸಮೀಪದಲ್ಲೇ ಇದ್ದ ಇನ್ನೊಂದು ಹಡಗಿನ ಸಿಬ್ಬಂದಿಯಿಂದ ಮಾಹಿತಿ ಪಡೆದ ಕರಾವಳಿ ಕಾವಲು ಪಡೆ ಸಿಬ್ಬಂದಿ ತುರ್ತು ಕಾರ್ಯಾಚರಣೆ ಆರಂಭಿಸಿದ್ದರು. ಉಳಿದ 9 ಜನರಿಗಾಗಿ ಶೋಧ ಮುಂದುವರಿಸಲಾಗಿದೆ. ಭಾರತೀಯ ನೌಕಾಪಡೆಯ ಹಡಗು ಹಾಗೂ ಮುಳುಗು ತಜ್ಞರು ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ ಎಂದು ಕರಾವಳಿ ಕಾವಲು ಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.