<p><strong>ಮಂಗಳೂರು:</strong> ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ ಸೋಂಕಿತರ ಸಂಖ್ಯೆ ಅಲ್ಪ ಇಳಿಕೆಯಾಗಿದೆ. ಸೋಮವಾರ ಜಿಲ್ಲೆಯಲ್ಲಿ 1,175 ಮಂದಿಗೆ ಕೋವಿಡ್–19 ದೃಢಪಟ್ಟಿದ್ದು, 985 ಮಂದಿ ಸೋಮವಾರದಂದು ಗುಣಮುಖರಾಗಿದ್ದಾರೆ. ಮೃತಪಟ್ಟ ಐವರಿಗೆ ಕೋವಿಡ್–19 ಇರುವುದು ಸೋಮವಾರ ದೃಢವಾಗಿದೆ.</p>.<p class="Subhead">306 ವಾಹನ ವಶ: ಜಿಲ್ಲೆಯಲ್ಲಿ ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದ 23 ಪ್ರಕರಣ ದಾಖಲಿಸಲಾಗಿದ್ದು, 306 ವಾಹನಗಳನ್ನು ಸೋಮವಾರ ವಶಕ್ಕೆ ಪಡೆಯಲಾಗಿದೆ. 637 ಮಂದಿಯ ವಿರುದ್ಧ ಮಾಸ್ಕ್ ಉಲ್ಲಂಘನೆ ಪ್ರಕರಣ ದಾಖಲಿಸಲಾಗಿದೆ.</p>.<p>ನಗರ ಕಮಿಷನರೇಟ್ ವ್ಯಾಪ್ತಿ ಯಲ್ಲಿ ಸಾಂಕ್ರಾಮಿಕ ರೋಗ ತಡೆ ಕಾಯ್ದೆ ಮತ್ತು ರಾಷ್ಟ್ರೀಯ ವಿಪತ್ತು ಉಲ್ಲಂಘನೆ ಕಾಯ್ದೆಯಡಿ 22 ಪ್ರಕರಣ ದಾಖಲಾಗಿವೆ. 178 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಮಾಸ್ಕ್ ಉಲ್ಲಂಘನೆಯ 325 ಪ್ರಕರಣ ದಾಖಲಾಗಿವೆ.</p>.<p>ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಸಾಂಕ್ರಾಮಿಕ ರೋಗ ತಡೆ ಕಾಯ್ದೆ ಮತ್ತು ರಾಷ್ಟ್ರೀಯ ವಿಪತ್ತು ಉಲ್ಲಂಘನೆ ಕಾಯ್ದೆಯಡಿ ತಲಾ ಒಂದು ಪ್ರಕರಣ, ಮಾಸ್ಕ್ ನಿಯಮ ಉಲ್ಲಂಘನೆಯ 312 ಪ್ರಕರಣ ದಾಖಲಾಗಿದ್ದು, 128 ವಾಹನ ವಶಕ್ಕೆ ಪಡೆಯಲಾಗಿದೆ.</p>.<p>ಉಡುಪಿ: ಜಿಲ್ಲೆಯಲ್ಲಿ 855 ಮಂದಿಯಲ್ಲಿ ಕೋವಿಡ್–19 ದೃಢಪಟ್ಟಿದ್ದು, 642 ಮಂದಿ ಗುಣಮುಖರಾಗಿದ್ದಾರೆ. ಮೃತ ಇಬ್ಬರಿಗೆ ಕೋವಿಡ್ ಇರುವುದು ಖಚಿತವಾಗಿದೆ.</p>.<p class="Subhead">ಕಾಸರಗೋಡು: ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್–19 ದೃಢಪಟ್ಟಿದ್ದು, 825 ಮಂದಿ ಗುಣಮುಖರಾಗಿದ್ದಾರೆ. ಸದ್ಯ 15,449 ಸಕ್ರಿಯ ಪ್ರಕರಣಗಳಿವೆ. ಇದುವರೆಗೆ 57,617 ಮಂದಿಗೆ ಸೋಂಕು ದೃಢಪಟ್ಟಿದ್ದು, 41,744 ಮಂದಿ ಗುಣಮುಖರಾಗಿದ್ದಾರೆ.</p>.<p class="Briefhead"><strong>ಮಹಿಳೆಯ ಸಾವು: ವರದಿಗೆ ಆದೇಶ</strong></p>.<p>ವೆನ್ಲಾಕ್ ಆಸ್ಪತ್ರೆಯಲ್ಲಿ ಕೋವಿಡ್-19 ಸೋಂಕಿನಿಂದ ಮಹಿಳೆಯೊಬ್ಬರು ಮೃತಪಟ್ಟಿದ್ದು, ಮಹಿಳೆಯ ಕುಟುಂಬದವರು ಆಸ್ಪತ್ರೆಯ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ಮೇಲೆ ಕರ್ತವ್ಯ ನಿರ್ಲಕ್ಷ್ಯ ಆರೋಪ ಮಾಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪ್ರಕರಣದ ಸಮಗ್ರ ವರದಿ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದಾರೆ.</p>.<p>ವರದಿ ಬಂದ ನಂತರ ನಿರ್ಲಕ್ಷ್ಯ ವಹಿಸಿರುವುದು ಕಂಡು ಬಂದಲ್ಲಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ ಸೋಂಕಿತರ ಸಂಖ್ಯೆ ಅಲ್ಪ ಇಳಿಕೆಯಾಗಿದೆ. ಸೋಮವಾರ ಜಿಲ್ಲೆಯಲ್ಲಿ 1,175 ಮಂದಿಗೆ ಕೋವಿಡ್–19 ದೃಢಪಟ್ಟಿದ್ದು, 985 ಮಂದಿ ಸೋಮವಾರದಂದು ಗುಣಮುಖರಾಗಿದ್ದಾರೆ. ಮೃತಪಟ್ಟ ಐವರಿಗೆ ಕೋವಿಡ್–19 ಇರುವುದು ಸೋಮವಾರ ದೃಢವಾಗಿದೆ.</p>.<p class="Subhead">306 ವಾಹನ ವಶ: ಜಿಲ್ಲೆಯಲ್ಲಿ ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದ 23 ಪ್ರಕರಣ ದಾಖಲಿಸಲಾಗಿದ್ದು, 306 ವಾಹನಗಳನ್ನು ಸೋಮವಾರ ವಶಕ್ಕೆ ಪಡೆಯಲಾಗಿದೆ. 637 ಮಂದಿಯ ವಿರುದ್ಧ ಮಾಸ್ಕ್ ಉಲ್ಲಂಘನೆ ಪ್ರಕರಣ ದಾಖಲಿಸಲಾಗಿದೆ.</p>.<p>ನಗರ ಕಮಿಷನರೇಟ್ ವ್ಯಾಪ್ತಿ ಯಲ್ಲಿ ಸಾಂಕ್ರಾಮಿಕ ರೋಗ ತಡೆ ಕಾಯ್ದೆ ಮತ್ತು ರಾಷ್ಟ್ರೀಯ ವಿಪತ್ತು ಉಲ್ಲಂಘನೆ ಕಾಯ್ದೆಯಡಿ 22 ಪ್ರಕರಣ ದಾಖಲಾಗಿವೆ. 178 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಮಾಸ್ಕ್ ಉಲ್ಲಂಘನೆಯ 325 ಪ್ರಕರಣ ದಾಖಲಾಗಿವೆ.</p>.<p>ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಸಾಂಕ್ರಾಮಿಕ ರೋಗ ತಡೆ ಕಾಯ್ದೆ ಮತ್ತು ರಾಷ್ಟ್ರೀಯ ವಿಪತ್ತು ಉಲ್ಲಂಘನೆ ಕಾಯ್ದೆಯಡಿ ತಲಾ ಒಂದು ಪ್ರಕರಣ, ಮಾಸ್ಕ್ ನಿಯಮ ಉಲ್ಲಂಘನೆಯ 312 ಪ್ರಕರಣ ದಾಖಲಾಗಿದ್ದು, 128 ವಾಹನ ವಶಕ್ಕೆ ಪಡೆಯಲಾಗಿದೆ.</p>.<p>ಉಡುಪಿ: ಜಿಲ್ಲೆಯಲ್ಲಿ 855 ಮಂದಿಯಲ್ಲಿ ಕೋವಿಡ್–19 ದೃಢಪಟ್ಟಿದ್ದು, 642 ಮಂದಿ ಗುಣಮುಖರಾಗಿದ್ದಾರೆ. ಮೃತ ಇಬ್ಬರಿಗೆ ಕೋವಿಡ್ ಇರುವುದು ಖಚಿತವಾಗಿದೆ.</p>.<p class="Subhead">ಕಾಸರಗೋಡು: ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್–19 ದೃಢಪಟ್ಟಿದ್ದು, 825 ಮಂದಿ ಗುಣಮುಖರಾಗಿದ್ದಾರೆ. ಸದ್ಯ 15,449 ಸಕ್ರಿಯ ಪ್ರಕರಣಗಳಿವೆ. ಇದುವರೆಗೆ 57,617 ಮಂದಿಗೆ ಸೋಂಕು ದೃಢಪಟ್ಟಿದ್ದು, 41,744 ಮಂದಿ ಗುಣಮುಖರಾಗಿದ್ದಾರೆ.</p>.<p class="Briefhead"><strong>ಮಹಿಳೆಯ ಸಾವು: ವರದಿಗೆ ಆದೇಶ</strong></p>.<p>ವೆನ್ಲಾಕ್ ಆಸ್ಪತ್ರೆಯಲ್ಲಿ ಕೋವಿಡ್-19 ಸೋಂಕಿನಿಂದ ಮಹಿಳೆಯೊಬ್ಬರು ಮೃತಪಟ್ಟಿದ್ದು, ಮಹಿಳೆಯ ಕುಟುಂಬದವರು ಆಸ್ಪತ್ರೆಯ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ಮೇಲೆ ಕರ್ತವ್ಯ ನಿರ್ಲಕ್ಷ್ಯ ಆರೋಪ ಮಾಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪ್ರಕರಣದ ಸಮಗ್ರ ವರದಿ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದಾರೆ.</p>.<p>ವರದಿ ಬಂದ ನಂತರ ನಿರ್ಲಕ್ಷ್ಯ ವಹಿಸಿರುವುದು ಕಂಡು ಬಂದಲ್ಲಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>