<p><strong>ಸುಳ್ಯ</strong>: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹಂತಕರ ಪತ್ತೆಗೆ ಪೊಲೀಸರು ಐದು ವಿಶೇಷ ತಂಡಗಳನ್ನು ರಚಿಸಿದ್ದಾರೆ.</p>.<p>ಆರೋಪಿಗಳ ಬೆನ್ನು ಹತ್ತಿ ಕೇರಳ, ಮಡಿಕೇರಿ, ಹಾಸನಕ್ಕೆ ಪೊಲೀಸರು ಮೂರು ತಂಡಗಳು ತೆರಳಿವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೃಷಿಕೇಷ್ ಸೋನಾವಣೆ ಮಾಹಿತಿ ನೀಡಿದ್ದಾರೆ.</p>.<p>ಕೊಲೆ ಆರೋಪಿಗಳಿಗಾಗಿ ಕೇರಳ ಗಡಿ ಪ್ರದೇಶ ಹಾಗೂ ಪುತ್ತೂರಿನ ಸುತ್ತಮುತ್ತ ನಾಕಾಬಂದಿ ಹಾಕಿ ವಾಹನಗಳನ್ನು ತಲಾಶ್ ಮಾಡಲಾಗುತ್ತಿದೆ.</p>.<p>ಮಂಗಳವಾರ ರಾತ್ರಿ 9 ಗಂಟೆ ಸುಮಾರಿಗೆ ಕೊಲೆ ಮಾಡಲಾಗಿತ್ತು.</p>.<p>ಬೈಕ್ ನಲ್ಲಿ ಬಂದ ತಂಡ ತಲವಾರಿನಿಂದ ಪ್ರವೀಣ್ ಅವರ ತಲೆಗೆ ಹೊಡೆದುಪರಾರಿ ಆಗಿದೆ. ಗಂಭೀರ ಗಾಯಗೊಂಡ ಅವರು ಆಸ್ಪತ್ರೆಗೆ ಸಾಗಿಸುವ ಸಂದರ್ಭ ಮೃತಪಟ್ಟಿದ್ದಾರೆ. ಬೆಳ್ಳಾರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<p>ಪ್ರವೀಣ್ ಅವರು ಬೆಳ್ಳಾರೆಯಲ್ಲಿ ಅಕ್ಷಯ ಕೋಳಿ ಅಂಗಡಿಯನ್ನು ನಡೆಸುತ್ತಿದ್ದರು. ಬಜರಂಗದಳವೂ ಸೇರಿದಂತೆ ಸಂಘ ಪರಿವಾರದ ಹಿಂದೂ ಸಂಘಟನೆಗಳಲ್ಲಿ ಸಕ್ರಿಯವಾಗಿದ್ದರು.</p>.<p><strong>ಪುತ್ತೂರು, ಸುಳ್ಯ, ನಿ಼ಷೇಧಾಜ್ಞೆ ಜಾರಿ</strong></p>.<p>ಮಂಗಳೂರು: ಪ್ರವೀಣ್ ಹತ್ಯೆ ಪ್ರಕರಣದಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಹಾಗೂ ಪುತ್ತೂರುಗಳಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ.</p>.<p>ಪರಿಸ್ಥಿತಿ ವಿಕೋಪಕ್ಕೆ ಹೋಗುವುದನ್ನು ತಡೆಯಲು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಅವರು ಪುತ್ತೂರು ಉಪವಿಭಾಗದ ವ್ಯಾಪ್ತಿಯಲ್ಲಿ ಸಿಆರ್ಪಿಸಿ ಸೆಕ್ಷನ್ 144 ಅಡಿ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ</p>.<p>ಇವನ್ನೂ ಓದಿ..</p>.<p><a href="https://www.prajavani.net/district/dakshina-kannada/bjp-leader-praveen-nettaru-murder-in-dakshina-kannada-957972.html" target="_blank">ಬೆಳ್ಳಾರೆ: ಬಿಜೆಪಿ ಮುಖಂಡನ ಕೊಲೆ</a></p>.<p><a href="https://www.prajavani.net/district/dakshina-kannada/praveen-murder-case-state-government-took-it-as-very-serious-says-sunil-kumar-957933.html" itemprop="url" target="_blank">ಪ್ರವೀಣ್ ಕೊಲೆಯನ್ನು ಸರ್ಕಾರಗಂಭೀರವಾಗಿ ಪರಿಗಣಿಸಿದೆ: ಸಚಿವ ಸುನೀಲ್ ಕುಮಾರ್</a></p>.<p><a href="https://www.prajavani.net/district/dakshina-kannada/hindu-organisation-decided-to-precession-of-praveen-dead-body-957971.html" itemprop="url">ಪ್ರವೀಣ್ ಮೃತದೇಹ ಮೆರವಣಿಗೆ: ಮೂರು ತಾಲ್ಲೂಕು ಬಂದ್- ಹಿಂದೂ ಸಂಘಟನೆಗಳ ಸೂಚನೆ</a></p>.<p><a href="https://www.prajavani.net/karnataka-news/hd-kumaraswamy-reaction-about-hindu-activist-praveen-nettaru-murder-case-958003.html" target="_blank">ಹಿಂಸೆಗೆ ಧರ್ಮವಿಲ್ಲ, ಕೊಲೆಗಡುಕ ಶಕ್ತಿಗಳ ಮುಂದೆ ಸರ್ಕಾರ ಮಂಡಿಯೂರಿದೆ: ಎಚ್ಡಿಕೆ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುಳ್ಯ</strong>: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹಂತಕರ ಪತ್ತೆಗೆ ಪೊಲೀಸರು ಐದು ವಿಶೇಷ ತಂಡಗಳನ್ನು ರಚಿಸಿದ್ದಾರೆ.</p>.<p>ಆರೋಪಿಗಳ ಬೆನ್ನು ಹತ್ತಿ ಕೇರಳ, ಮಡಿಕೇರಿ, ಹಾಸನಕ್ಕೆ ಪೊಲೀಸರು ಮೂರು ತಂಡಗಳು ತೆರಳಿವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೃಷಿಕೇಷ್ ಸೋನಾವಣೆ ಮಾಹಿತಿ ನೀಡಿದ್ದಾರೆ.</p>.<p>ಕೊಲೆ ಆರೋಪಿಗಳಿಗಾಗಿ ಕೇರಳ ಗಡಿ ಪ್ರದೇಶ ಹಾಗೂ ಪುತ್ತೂರಿನ ಸುತ್ತಮುತ್ತ ನಾಕಾಬಂದಿ ಹಾಕಿ ವಾಹನಗಳನ್ನು ತಲಾಶ್ ಮಾಡಲಾಗುತ್ತಿದೆ.</p>.<p>ಮಂಗಳವಾರ ರಾತ್ರಿ 9 ಗಂಟೆ ಸುಮಾರಿಗೆ ಕೊಲೆ ಮಾಡಲಾಗಿತ್ತು.</p>.<p>ಬೈಕ್ ನಲ್ಲಿ ಬಂದ ತಂಡ ತಲವಾರಿನಿಂದ ಪ್ರವೀಣ್ ಅವರ ತಲೆಗೆ ಹೊಡೆದುಪರಾರಿ ಆಗಿದೆ. ಗಂಭೀರ ಗಾಯಗೊಂಡ ಅವರು ಆಸ್ಪತ್ರೆಗೆ ಸಾಗಿಸುವ ಸಂದರ್ಭ ಮೃತಪಟ್ಟಿದ್ದಾರೆ. ಬೆಳ್ಳಾರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<p>ಪ್ರವೀಣ್ ಅವರು ಬೆಳ್ಳಾರೆಯಲ್ಲಿ ಅಕ್ಷಯ ಕೋಳಿ ಅಂಗಡಿಯನ್ನು ನಡೆಸುತ್ತಿದ್ದರು. ಬಜರಂಗದಳವೂ ಸೇರಿದಂತೆ ಸಂಘ ಪರಿವಾರದ ಹಿಂದೂ ಸಂಘಟನೆಗಳಲ್ಲಿ ಸಕ್ರಿಯವಾಗಿದ್ದರು.</p>.<p><strong>ಪುತ್ತೂರು, ಸುಳ್ಯ, ನಿ಼ಷೇಧಾಜ್ಞೆ ಜಾರಿ</strong></p>.<p>ಮಂಗಳೂರು: ಪ್ರವೀಣ್ ಹತ್ಯೆ ಪ್ರಕರಣದಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಹಾಗೂ ಪುತ್ತೂರುಗಳಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ.</p>.<p>ಪರಿಸ್ಥಿತಿ ವಿಕೋಪಕ್ಕೆ ಹೋಗುವುದನ್ನು ತಡೆಯಲು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಅವರು ಪುತ್ತೂರು ಉಪವಿಭಾಗದ ವ್ಯಾಪ್ತಿಯಲ್ಲಿ ಸಿಆರ್ಪಿಸಿ ಸೆಕ್ಷನ್ 144 ಅಡಿ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ</p>.<p>ಇವನ್ನೂ ಓದಿ..</p>.<p><a href="https://www.prajavani.net/district/dakshina-kannada/bjp-leader-praveen-nettaru-murder-in-dakshina-kannada-957972.html" target="_blank">ಬೆಳ್ಳಾರೆ: ಬಿಜೆಪಿ ಮುಖಂಡನ ಕೊಲೆ</a></p>.<p><a href="https://www.prajavani.net/district/dakshina-kannada/praveen-murder-case-state-government-took-it-as-very-serious-says-sunil-kumar-957933.html" itemprop="url" target="_blank">ಪ್ರವೀಣ್ ಕೊಲೆಯನ್ನು ಸರ್ಕಾರಗಂಭೀರವಾಗಿ ಪರಿಗಣಿಸಿದೆ: ಸಚಿವ ಸುನೀಲ್ ಕುಮಾರ್</a></p>.<p><a href="https://www.prajavani.net/district/dakshina-kannada/hindu-organisation-decided-to-precession-of-praveen-dead-body-957971.html" itemprop="url">ಪ್ರವೀಣ್ ಮೃತದೇಹ ಮೆರವಣಿಗೆ: ಮೂರು ತಾಲ್ಲೂಕು ಬಂದ್- ಹಿಂದೂ ಸಂಘಟನೆಗಳ ಸೂಚನೆ</a></p>.<p><a href="https://www.prajavani.net/karnataka-news/hd-kumaraswamy-reaction-about-hindu-activist-praveen-nettaru-murder-case-958003.html" target="_blank">ಹಿಂಸೆಗೆ ಧರ್ಮವಿಲ್ಲ, ಕೊಲೆಗಡುಕ ಶಕ್ತಿಗಳ ಮುಂದೆ ಸರ್ಕಾರ ಮಂಡಿಯೂರಿದೆ: ಎಚ್ಡಿಕೆ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>