ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಳೂರು | ಮಸ್ಕತ್‌ನಿಂದ ಬಂದಿಳಿದ ವಿಮಾನ, 63 ಮಂದಿ ಆಗಮನ

Last Updated 20 ಮೇ 2020, 16:49 IST
ಅಕ್ಷರ ಗಾತ್ರ

ಮಂಗಳೂರು: ಲಾಕ್‌ಡೌನ್‌ ಬಳಿಕ ಕೊಲ್ಲಿ ರಾಷ್ಟ್ರಗಳಿಂದ ಅನಿವಾಸಿ ಭಾರತೀಯರನ್ನು ಮಂಗಳೂರಿಗೆ ಕರೆತಂದ ಮೂರನೇ ವಿಮಾನವು ಬುಧವಾರ ಮಸ್ಕತ್‌ನಿಂದ ಹೊರಟು ಬೆಂಗಳೂರು ಮೂಲಕ ಮಂಗಳೂರಿಗೆ ರಾತ್ರಿ 8.05ಕ್ಕೆ ಬಂದಿಳಿಯಿತು.

‘ಒಟ್ಟು 63 ಪ್ರಯಾಣಿಕರಿದ್ದರು. ಪ್ರಯಾಣಿಕರ ಬೇಡಿಕೆಯಂತೆ ಅವರವರ ಜಿಲ್ಲೆಗಳಿಗೆ ಕಳುಹಿಸಿಕೊಡಲು ವ್ಯವಸ್ಥೆ ಮಾಡಲಾಯಿತು’ ಎಂದುನೋಡಲ್ ಅಧಿಕಾರಿ ರಾಹುಲ್ ಶಿಂಧೆ ತಿಳಿಸಿದರು.

ಒಟ್ಟು ಪ್ರಯಾಣಿಕರ ಪೈಕಿ ಉತ್ತರ ಕನ್ನಡದ 3, ಉಡುಪಿಯ 20 ಮತ್ತು ದಕ್ಷಿಣ ಕನ್ನಡ ಜಿಲ್ಲೆಯ 40 ಮಂದಿ ಪ್ರಯಾಣಿಕರು ಇದ್ದರು. ಇದರಲ್ಲಿ ಏಳು ಮಂದಿ ಗರ್ಭಿಣಿಯರು ಎಂದು ತಿಳಿದುಬಂದಿದೆ.

ಪ್ರಯಾಣಿಕರಿಗೆ ಆರೋಗ್ಯ ಪರೀಕ್ಷೆ, ಕ್ವಾರಂಟೈನ್‌ ಹೋಟೆಲ್ ನಿಗದಿ, ಊಟೋಪಚಾರ, ಇಮಿಗ್ರೇಷನ್‌ ಹಾಗೂ ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಡಲಾಗಿದೆ.

ದುಬೈನಿಂದ ಬಂದಿದ್ದ ಮೊದಲ ವಿಮಾನದಲ್ಲಿ ಜಿಲ್ಲೆಯಲ್ಲಿ ಉಳಿದ 125 ಮಂದಿ ಪೈಕಿ 9 ಹಾಗೂ ಎರಡನೇ ವಿಮಾನದ 110 ಮಂದಿ ಪೈಕಿ 24 ಜನರಿಗೆ ಸರ್ಕಾರದ ವ್ಯವಸ್ಥೆಯಲ್ಲಿ ಕ್ವಾರಂಟೈನ್ ಮಾಡಲಾಗಿದೆ. ಸೌದಿಯಿಂದ ಬೆಂಗಳೂರಿಗೆ ಬಂದಿಳಿದ ವಿಮಾನದಲ್ಲೂ ದಕ್ಷಿಣ ಕನ್ನಡ ಜಿಲ್ಲೆಯ 20 ಮಂದಿ ಪ್ರಯಾಣಿಕರು ಇದ್ದರು ಎಂದು ಎನ್‌ಆರ್‌ಐ ಟಾಸ್ಕ್‌ಫೋರ್ಸ್ ಘಟಕ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT