<p><strong>ಮಂಗಳೂರು: </strong>ದುಬೈಯಲ್ಲಿ ಸಿಲುಕಿರುವ ಅನಿವಾಸಿ ಕನ್ನಡಿಗರನ್ನು ಹೊತ್ತ ಏರ್ ಇಂಡಿಯಾ ವಿಮಾನ ಐಎಕ್ಸ್ 384 ಸಂಜೆ 5.10ಕ್ಕೆ ಹೊರಡಲಿದ್ದು, ರಾತ್ರಿ 10.10ಕ್ಕೆ ಮಂಗಳೂರು ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಲಿದೆ.</p>.<p>ದುಬೈ ವಿಮಾನ ನಿಲ್ದಾಣದಲ್ಲಿ ಟರ್ಮಿನಲ್ 2 ರಿಂದ ಈ ವಿಮಾನ ಹೊರಡಲಿದ್ದು, ಈಗಾಗಲೇ ಪ್ರಯಾಣಿಕರು ವಿಮಾನ ನಿಲ್ದಾಣ ತಲುಪಿದ್ದಾರೆ. ಲಗೇಜ್ ತಪಾಸಣೆ ಇತ್ಯಾದಿ ಪ್ರಕ್ರಿಯೆ ಶುರುವಾಗಿದ್ದು, ಪ್ರತಿ ಪ್ರಯಾಣಿಕರು ಟಿಕೆಟ್ ದರ ಪಾವತಿಸಬೇಕಾಗಿದೆ.</p>.<p>ಮೊದಲು ಎಲ್ಲ ಪ್ರಯಾಣಿಕರ ವೈದ್ಯಕೀಯ ತಪಾಸಣೆ ನಡೆಯಲಿದ್ದು, ಬಳಿಕ ಇತರ ಪ್ರಕ್ರಿಯೆಗಳು ನಡೆಯಲಿವೆ. ಈಗಾಗಲೇ ಬೋರ್ಡಿಂಗ್ ಪ್ರಕ್ರಿಯೆ ಆರಂಭವಾಗಿದೆ.</p>.<p>ವಿಮಾನದಲ್ಲಿ ಒಟ್ಟು 176 ಜನ ಪ್ರಯಾಣಿಕರಿದ್ದು, ಇದರಲ್ಲಿ 95 ಪುರುಷರು, 81 ಮಹಿಳೆಯರು ಸೇರಿದ್ದಾರೆ. 12 ಮಂದಿ ತುರ್ತು ವೈದ್ಯಕೀಯ ಚಿಕಿತ್ಸೆ ಅಗತ್ಯ ಇರುವವರು ಹಾಗೂ 38 ಗರ್ಭಿಣಿಯರು ಮಂಗಳೂರಿಗೆ ಬರಲಿದ್ದಾರೆ.</p>.<p>ವಿದೇಶದಿಂದ ಬರುವವರಿಗೆ ಪ್ರತ್ಯೇಕವಾದ ಹೋಟೆಲ್ ವ್ಯವಸ್ಥೆಯನ್ನು ಮಾಡಲಾಗಿದ್ದು, ಅಲ್ಲಿ ಕನಿಷ್ಠ ಶುಲ್ಕವನ್ನು ವಿಧಿಸಿ ಅವರನ್ನು ಹೋಟೆಲ್ ಕ್ವಾರಂಟೈನ್ ಮಾಡಲಾಗುತ್ತದೆ. ಈಗಾಗಲೇ 17 ಹೋಟೆಲ್ಗಳು ಹಾಗೂ 12 ಹಾಸ್ಟೆಲ್ಗಳನ್ನು ಗುರುತಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು: </strong>ದುಬೈಯಲ್ಲಿ ಸಿಲುಕಿರುವ ಅನಿವಾಸಿ ಕನ್ನಡಿಗರನ್ನು ಹೊತ್ತ ಏರ್ ಇಂಡಿಯಾ ವಿಮಾನ ಐಎಕ್ಸ್ 384 ಸಂಜೆ 5.10ಕ್ಕೆ ಹೊರಡಲಿದ್ದು, ರಾತ್ರಿ 10.10ಕ್ಕೆ ಮಂಗಳೂರು ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಲಿದೆ.</p>.<p>ದುಬೈ ವಿಮಾನ ನಿಲ್ದಾಣದಲ್ಲಿ ಟರ್ಮಿನಲ್ 2 ರಿಂದ ಈ ವಿಮಾನ ಹೊರಡಲಿದ್ದು, ಈಗಾಗಲೇ ಪ್ರಯಾಣಿಕರು ವಿಮಾನ ನಿಲ್ದಾಣ ತಲುಪಿದ್ದಾರೆ. ಲಗೇಜ್ ತಪಾಸಣೆ ಇತ್ಯಾದಿ ಪ್ರಕ್ರಿಯೆ ಶುರುವಾಗಿದ್ದು, ಪ್ರತಿ ಪ್ರಯಾಣಿಕರು ಟಿಕೆಟ್ ದರ ಪಾವತಿಸಬೇಕಾಗಿದೆ.</p>.<p>ಮೊದಲು ಎಲ್ಲ ಪ್ರಯಾಣಿಕರ ವೈದ್ಯಕೀಯ ತಪಾಸಣೆ ನಡೆಯಲಿದ್ದು, ಬಳಿಕ ಇತರ ಪ್ರಕ್ರಿಯೆಗಳು ನಡೆಯಲಿವೆ. ಈಗಾಗಲೇ ಬೋರ್ಡಿಂಗ್ ಪ್ರಕ್ರಿಯೆ ಆರಂಭವಾಗಿದೆ.</p>.<p>ವಿಮಾನದಲ್ಲಿ ಒಟ್ಟು 176 ಜನ ಪ್ರಯಾಣಿಕರಿದ್ದು, ಇದರಲ್ಲಿ 95 ಪುರುಷರು, 81 ಮಹಿಳೆಯರು ಸೇರಿದ್ದಾರೆ. 12 ಮಂದಿ ತುರ್ತು ವೈದ್ಯಕೀಯ ಚಿಕಿತ್ಸೆ ಅಗತ್ಯ ಇರುವವರು ಹಾಗೂ 38 ಗರ್ಭಿಣಿಯರು ಮಂಗಳೂರಿಗೆ ಬರಲಿದ್ದಾರೆ.</p>.<p>ವಿದೇಶದಿಂದ ಬರುವವರಿಗೆ ಪ್ರತ್ಯೇಕವಾದ ಹೋಟೆಲ್ ವ್ಯವಸ್ಥೆಯನ್ನು ಮಾಡಲಾಗಿದ್ದು, ಅಲ್ಲಿ ಕನಿಷ್ಠ ಶುಲ್ಕವನ್ನು ವಿಧಿಸಿ ಅವರನ್ನು ಹೋಟೆಲ್ ಕ್ವಾರಂಟೈನ್ ಮಾಡಲಾಗುತ್ತದೆ. ಈಗಾಗಲೇ 17 ಹೋಟೆಲ್ಗಳು ಹಾಗೂ 12 ಹಾಸ್ಟೆಲ್ಗಳನ್ನು ಗುರುತಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>