ಮಂಗಳೂರು: ಮಳೆಯ ಅಬ್ಬರ ಶುಕ್ರವಾರವೂ ಮುಂದುವರಿದಿದೆ. ಪಶ್ಚಿಮ ಘಟ್ಟದಲ್ಲಿ ಸತತ ಮಳೆ ಸುರಿಯುತ್ತಿದ್ದು, ನದಿಗಳಲ್ಲಿ ನೀರಿನ ಮಟ್ಟ ಹೆಚ್ಚಾಗುತ್ತಿದೆ.
ಘಟ್ಟ ಪ್ರದೇಶಗಳಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ಕುಮಾರಧಾರಾ ನದಿ ತುಂಬಿ ಹರಿಯುತ್ತಿದ್ದು, ಕುಕ್ಕೆ ಸುಬ್ರಹ್ಮಣ್ಯ ಸ್ನಾನಘಟ್ಟ ಸತತ ಐದನೇ ದಿನವೂ ಜಲಾವೃತಗೊಂಡಿದೆ.
ಶೌಚಾಲಯ, ಸ್ನಾನಗೃಹ, ಲಗೇಜ್ ಕೊಠಡಿಗಳಿಗೆ ನೀರು ನುಗ್ಗಿದೆ. ಕೃಷಿ ತೋಟಗಳಿಗೂ ಕುಮಾರಧಾರಾ ನದಿ ನೀರು ನುಗ್ಗಿದೆ.
ಬಿಸಿಲೆ ಘಾಟ್ ನಲ್ಲಿ ಮತ್ತೆ ಕೆಲವು ಕಡೆ ಗುಡ್ಡ ಜರಿತವಾಗಿದ್ದು, ಬಿಸಿಲೆ ಘಾಟ್- ಸುಬ್ರಹ್ಮಣ್ಯ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ.
ಗುರುವಾರ ರಾತ್ರಿ ಚಾರ್ಮಾಡಿ ಘಾಟಿಯಲ್ಲಿ ಗುಡ್ಡ ಕುಸಿತಗೊಂಡು ಸಂಚಾರಕ್ಕೆ ತೊಡಕಾಗಿದೆ.
ಅಲೆಖಾನ್ ಸಮೀಪ ಗುಡ್ಡ ಕುಸಿತಗೊಂಡ ಪರಿಣಾಮ ಶುಕ್ರವಾರ ಮುಂಜಾನೆ ವೇಳೆ ವಾಹನ ಸಂಚಾರಕ್ಕೆ ಮತ್ತೆ ಅಡ್ಡಿಯಾಗಿದೆ. ಸದ್ಯ ಸ್ಥಳದಲ್ಲಿ ತೆರವು ಕಾರ್ಯಾಚರಣೆ ಸಾಗುತ್ತಿದ್ದು, ಒಂದು ಜಿಸಿಬಿ ನಿಯೋಜಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.