<p>ಮಂಗಳೂರು: ಮಂಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪಡಿತರ ಸಮಸ್ಯೆ, ಎಪಿಎಲ್, ಬಿಪಿಎಲ್ ಕಾರ್ಡ್ ಸಿಗದೆ ಇರುವ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಜುಲೈ 7ರಂದು ಆಹಾರ ಅದಾಲತ್ ನಡೆಸಲಾಗುವುದು ಎಂದು ಶಾಸಕ ಯು.ಟಿ. ಖಾದರ್ ತಿಳಿಸಿದರು.</p>.<p>ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸಮಸ್ಯೆ ಇರುವವರು ತಮ್ಮ ಗ್ರಾಮ ಪಂಚಾಯಿತಿಗಳಿಗೆ ತೆರಳಿ ಜುಲೈ 1 ರೊಳಗೆ ಅರ್ಜಿ ಸಲ್ಲಿಸಬೇಕು ಎಂದರು.</p>.<p>ಪಡಿತರ ಅರ್ಜಿ ಸಮಸ್ಯೆ ಪರಿಹರಿಸುವ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು ಹೇಳಿಕೆ ನೀಡಿ ಒಂದೂವರೆ ತಿಂಗಳಾದರೂ ಯಾವುದೇ ಪರಿಹಾರ ದೊರೆತಿಲ್ಲ. ಪಡಿತರ ಚೀಟಿ ವಿತರಣೆ ಆಗುತ್ತಿಲ್ಲ. ಪರಿಹಾರಕ್ಕೆ ಯಾವುದೇ ಕ್ರಮ ನಡೆಯುತ್ತಿಲ್ಲ ಎಂದರು.</p>.<p>ಮೂರು ಸೆಂಟ್ಸ್ ಜಾಗ ಹೊಂದಿರುವ ವ್ಯಕ್ತಿ ಮನೆ ಕಟ್ಟಲು ಸಾಲಕ್ಕೆ ಬ್ಯಾಂಕಿಗೆ ಅರ್ಜಿ ಹಾಕಿದರೆ, ಆತನ ಬಿಪಿಎಲ್ ಸೌಲಭ್ಯ ಕಡಿತವಾಗುತ್ತದೆ. ಈ ರೀತಿ ಅಸಮರ್ಪಕ ಮಾನದಂಡದಿಂದ ಬಿಪಿಎಲ್ ಕಾರ್ಡ್ ರದ್ದು ಮಾಡಲಾಗುತ್ತಿದೆ. ಜನ ಕೋವಿಡ್ ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಹೊಸ ಬಿಪಿಎಲ್ ಕಾರ್ಡ್ ವಿತರಿಸುವ ಬಗ್ಗೆ ಸರ್ಕಾರಕ್ಕೆ ಆಸಕ್ತಿ ಇಲ್ಲ. ಅದಕ್ಕಾಗಿ ಆಹಾರ ಅದಾಲತ್ ನಡೆಸುವುದು ಅನಿವಾರ್ಯವಾಗಿದೆ ಎಂದು ತಿಳಿಸಿದರು.</p>.<p>ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ಸಾಕಷ್ಟು ಸಮಸ್ಯೆ ಎದುರಿಸುತ್ತಿವೆ. ಇದೀಗ ಲಾಕ್ಡೌನ್ ಮುಕ್ತಾಯವಾಗುತ್ತಿರುವ ಸಂದರ್ಭದಲ್ಲಿ ಅವುಗಳ ಪುನಶ್ಚೇತನ ಕ್ಕೆ ಸರ್ಕಾರ, ಜಿಲ್ಲಾಡಳಿತ ತುರ್ತು ನೆರವು, ಸಹಕಾರ ನೀಡಬೇಕು ಎಂದು ಆಗ್ರಹಿಸಿದರು.</p>.<p>ಸ್ಮಾರ್ಟ್ ಸಿಟಿ ಕಾಮಗಾರಿ ವಿಳಂಬವಾಗಿ ನಡೆಯುತ್ತಿದ್ದು, ಪಾಲಿಕೆ ವ್ಯಾಪ್ತಿಯಲ್ಲಿ ವಾಹನ ಸಂಚಾರ ಕಷ್ಟವಾಗಿದೆ. ಬಸ್ ಸಂಚಾರ ಆರಂಭಗೊಂಡಾಗ ಇನ್ನಷ್ಟು ಹದಗೆಡುತ್ತದೆ. ಈ ಬಗ್ಗೆ ಪಾಲಿಕೆ ಆಯುಕ್ತರು ತುರ್ತು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.</p>.<p>ಕಾಂಗ್ರೆಸ್ ಮುಖಂಡರಾದ ಈಶ್ವರ ಉಳ್ಳಾಲ್, ಸಂತೋಷ್ ಶೆಟ್ಟಿ, ಮುರಳಿ ಮೋಹನ್ ಸಾಲ್ಯಾನ್ ತೊಕ್ಕೊಟ್ಟು, ಅಭಿಷೇಕ್ ಉಳ್ಳಾಲ್ ಇದ್ದರು.</p>.<p class="Briefhead">‘ಬಿಜೆಪಿ ಈಗಲೇ ಸೋಲು ಒಪ್ಪಿಕೊಂಡಿದೆ’</p>.<p>ರಾಜ್ಯದಲ್ಲಿ ಬಿಜೆಪಿ ಈಗಾಗಲೇ ಸೋಲೊಪ್ಪಿಕೊಂಡಿದೆ. ಅದಕ್ಕಾಗಿಯೇ ಕಾಂಗ್ರೆಸ್ ಸಿಎಂ ಬಗ್ಗೆ ಮಾತನಾಡುತ್ತಿದ್ದಾರೆ. ಬಿಜೆಪಿಯವರ ಬೇಜವಾಬ್ದಾರಿ ನಡುವಳಿಕೆಯಿಂದ ರಾಜ್ಯದ ಜನತೆ ರೋಸಿ ಹೋಗಿದ್ದಾರೆ ಎಂದು ಯು.ಟಿ. ಖಾದರ್ ಹೇಳಿದರು.</p>.<p>ಕೇರಳ ಸರ್ಕಾರ ಕನ್ನಡದಲ್ಲಿರುವ ಹೆಸರು ಬದಲಾವಣೆ ಮಾಡುತ್ತಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಗಡಿ ಪ್ರದೇಶದಲ್ಲಿ ಕನ್ನಡಿಗರಿಗೆ ಅಥವಾ ಕನ್ನಡ ಭಾಷೆಯ ಬೆಳವಣಿಗೆಗೆ ಧಕ್ಕೆಯಾಗುವ ಯಾವ ಕೆಲಸ ನಡೆಯಬಾರದು ಎನ್ನುವುದು ಎಲ್ಲರ ಆಶಯ ಎಂದರು.</p>.<p>ಅಲ್ಲಿನ ಶಾಸಕರೊಬ್ಬರು ಕೇರಳ ವಿಧಾನಸಭೆಯಲ್ಲಿ ಕನ್ನಡದಲ್ಲಿ ಪ್ರತಿಜ್ಞೆ ಸ್ವೀಕರಿಸಿ ಕನ್ನಡ ಅಭಿಮಾನ ತೋರಿದ್ದಾರೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಂಗಳೂರು: ಮಂಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪಡಿತರ ಸಮಸ್ಯೆ, ಎಪಿಎಲ್, ಬಿಪಿಎಲ್ ಕಾರ್ಡ್ ಸಿಗದೆ ಇರುವ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಜುಲೈ 7ರಂದು ಆಹಾರ ಅದಾಲತ್ ನಡೆಸಲಾಗುವುದು ಎಂದು ಶಾಸಕ ಯು.ಟಿ. ಖಾದರ್ ತಿಳಿಸಿದರು.</p>.<p>ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸಮಸ್ಯೆ ಇರುವವರು ತಮ್ಮ ಗ್ರಾಮ ಪಂಚಾಯಿತಿಗಳಿಗೆ ತೆರಳಿ ಜುಲೈ 1 ರೊಳಗೆ ಅರ್ಜಿ ಸಲ್ಲಿಸಬೇಕು ಎಂದರು.</p>.<p>ಪಡಿತರ ಅರ್ಜಿ ಸಮಸ್ಯೆ ಪರಿಹರಿಸುವ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು ಹೇಳಿಕೆ ನೀಡಿ ಒಂದೂವರೆ ತಿಂಗಳಾದರೂ ಯಾವುದೇ ಪರಿಹಾರ ದೊರೆತಿಲ್ಲ. ಪಡಿತರ ಚೀಟಿ ವಿತರಣೆ ಆಗುತ್ತಿಲ್ಲ. ಪರಿಹಾರಕ್ಕೆ ಯಾವುದೇ ಕ್ರಮ ನಡೆಯುತ್ತಿಲ್ಲ ಎಂದರು.</p>.<p>ಮೂರು ಸೆಂಟ್ಸ್ ಜಾಗ ಹೊಂದಿರುವ ವ್ಯಕ್ತಿ ಮನೆ ಕಟ್ಟಲು ಸಾಲಕ್ಕೆ ಬ್ಯಾಂಕಿಗೆ ಅರ್ಜಿ ಹಾಕಿದರೆ, ಆತನ ಬಿಪಿಎಲ್ ಸೌಲಭ್ಯ ಕಡಿತವಾಗುತ್ತದೆ. ಈ ರೀತಿ ಅಸಮರ್ಪಕ ಮಾನದಂಡದಿಂದ ಬಿಪಿಎಲ್ ಕಾರ್ಡ್ ರದ್ದು ಮಾಡಲಾಗುತ್ತಿದೆ. ಜನ ಕೋವಿಡ್ ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಹೊಸ ಬಿಪಿಎಲ್ ಕಾರ್ಡ್ ವಿತರಿಸುವ ಬಗ್ಗೆ ಸರ್ಕಾರಕ್ಕೆ ಆಸಕ್ತಿ ಇಲ್ಲ. ಅದಕ್ಕಾಗಿ ಆಹಾರ ಅದಾಲತ್ ನಡೆಸುವುದು ಅನಿವಾರ್ಯವಾಗಿದೆ ಎಂದು ತಿಳಿಸಿದರು.</p>.<p>ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ಸಾಕಷ್ಟು ಸಮಸ್ಯೆ ಎದುರಿಸುತ್ತಿವೆ. ಇದೀಗ ಲಾಕ್ಡೌನ್ ಮುಕ್ತಾಯವಾಗುತ್ತಿರುವ ಸಂದರ್ಭದಲ್ಲಿ ಅವುಗಳ ಪುನಶ್ಚೇತನ ಕ್ಕೆ ಸರ್ಕಾರ, ಜಿಲ್ಲಾಡಳಿತ ತುರ್ತು ನೆರವು, ಸಹಕಾರ ನೀಡಬೇಕು ಎಂದು ಆಗ್ರಹಿಸಿದರು.</p>.<p>ಸ್ಮಾರ್ಟ್ ಸಿಟಿ ಕಾಮಗಾರಿ ವಿಳಂಬವಾಗಿ ನಡೆಯುತ್ತಿದ್ದು, ಪಾಲಿಕೆ ವ್ಯಾಪ್ತಿಯಲ್ಲಿ ವಾಹನ ಸಂಚಾರ ಕಷ್ಟವಾಗಿದೆ. ಬಸ್ ಸಂಚಾರ ಆರಂಭಗೊಂಡಾಗ ಇನ್ನಷ್ಟು ಹದಗೆಡುತ್ತದೆ. ಈ ಬಗ್ಗೆ ಪಾಲಿಕೆ ಆಯುಕ್ತರು ತುರ್ತು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.</p>.<p>ಕಾಂಗ್ರೆಸ್ ಮುಖಂಡರಾದ ಈಶ್ವರ ಉಳ್ಳಾಲ್, ಸಂತೋಷ್ ಶೆಟ್ಟಿ, ಮುರಳಿ ಮೋಹನ್ ಸಾಲ್ಯಾನ್ ತೊಕ್ಕೊಟ್ಟು, ಅಭಿಷೇಕ್ ಉಳ್ಳಾಲ್ ಇದ್ದರು.</p>.<p class="Briefhead">‘ಬಿಜೆಪಿ ಈಗಲೇ ಸೋಲು ಒಪ್ಪಿಕೊಂಡಿದೆ’</p>.<p>ರಾಜ್ಯದಲ್ಲಿ ಬಿಜೆಪಿ ಈಗಾಗಲೇ ಸೋಲೊಪ್ಪಿಕೊಂಡಿದೆ. ಅದಕ್ಕಾಗಿಯೇ ಕಾಂಗ್ರೆಸ್ ಸಿಎಂ ಬಗ್ಗೆ ಮಾತನಾಡುತ್ತಿದ್ದಾರೆ. ಬಿಜೆಪಿಯವರ ಬೇಜವಾಬ್ದಾರಿ ನಡುವಳಿಕೆಯಿಂದ ರಾಜ್ಯದ ಜನತೆ ರೋಸಿ ಹೋಗಿದ್ದಾರೆ ಎಂದು ಯು.ಟಿ. ಖಾದರ್ ಹೇಳಿದರು.</p>.<p>ಕೇರಳ ಸರ್ಕಾರ ಕನ್ನಡದಲ್ಲಿರುವ ಹೆಸರು ಬದಲಾವಣೆ ಮಾಡುತ್ತಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಗಡಿ ಪ್ರದೇಶದಲ್ಲಿ ಕನ್ನಡಿಗರಿಗೆ ಅಥವಾ ಕನ್ನಡ ಭಾಷೆಯ ಬೆಳವಣಿಗೆಗೆ ಧಕ್ಕೆಯಾಗುವ ಯಾವ ಕೆಲಸ ನಡೆಯಬಾರದು ಎನ್ನುವುದು ಎಲ್ಲರ ಆಶಯ ಎಂದರು.</p>.<p>ಅಲ್ಲಿನ ಶಾಸಕರೊಬ್ಬರು ಕೇರಳ ವಿಧಾನಸಭೆಯಲ್ಲಿ ಕನ್ನಡದಲ್ಲಿ ಪ್ರತಿಜ್ಞೆ ಸ್ವೀಕರಿಸಿ ಕನ್ನಡ ಅಭಿಮಾನ ತೋರಿದ್ದಾರೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>