‘ಧರ್ಮಸ್ಥಳವು ಸತ್ಯ, ಧರ್ಮ, ನ್ಯಾಯ ಮತ್ತು ನೀತಿ ಸದಾ ಜಾಗೃತವಾಗಿರುವ ಪವಿತ್ರ ಕ್ಷೇತ್ರವಾಗಿದೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ರುಡ್ಸೆಟ್ಗಳು, ಕೆರೆಗಳಿಗೆ ಕಾಯಕಲ್ಪ, ಶುದ್ಧ ಕುಡಿಯುವ ನೀರಿನ ಪೂರೈಕೆ, ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಅಭಿಯಾನ ಇತ್ಯಾದಿ ಸೇವಾ ಕಾರ್ಯಗಳು ಸರ್ಕಾರ ಹಾಗೂ ಸರ್ವರಿಂದಲೂ ಮಾನ್ಯತೆ ಹಾಗೂ ವಿಶ್ವಾಸಾರ್ಹತೆಯನ್ನು ಪಡೆದಿವೆ ಎಂದು ಹೇಳಿದರು.