ಟೂರ್ನಿಯಲ್ಲಿ ಕೇರಳ, ತಮಿಳುನಾಡು, ಗೋವಾದ ಆಯ್ದ 16 ತಂಡಗಳು ಭಾಗವಹಿಸಲಿವೆ. ವಿಜೇತ ತಂಡಕ್ಕೆ ಪ್ರಥಮ ₹1 ಲಕ್ಷ, ದ್ವಿತೀಯ ₹50 ಸಾವಿರ ಬಹುಮಾನ ನಿಗದಿಪಡಿಸಲಾಗಿದೆ. ಸಂಘದ ಅಮೃತ ಮಹೋತ್ಸವದ ಅಂಗವಾಗಿ ₹1 ಕೋಟಿ ವೆಚ್ಚದ ಕಾರ್ಯಯೋಜನೆ ರೂಪಿಸಲಾಗಿದೆ. ಶೈಕ್ಷಣಿಕ ಕ್ಷೇತ್ರಕ್ಕೆ ₹25 ಲಕ್ಷ, ಅಮೃತ ಮಹೋತ್ಸವ ಕಟ್ಟಡಕ್ಕೆ ₹25 ಲಕ್ಷ, ಊರಿನ ವಿವಿಧ ಸೌಲಭ್ಯಗಳಿಗೆ ₹20 ಲಕ್ಷ, ಕ್ರೀಡಾಕೂಟಗಳಿಗೆ ₹30 ಲಕ್ಷ ನಿಗದಿಪಡಿಸಲಾಗಿದೆ. 75 ದಿನಗಳ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಹಗ್ಗಜಗ್ಗಾಟ, ನದಿಯಲ್ಲಿ ಬಲೆ ಬೀಸುವುದು, ಲಗೋರಿ ಸೇರಿದಂತೆ ವಿವಿಧ ಸ್ಪರ್ಧೆಗಳು ನಡೆಯಲಿವೆ. ಏಪ್ರಿಲ್ ಕೊನೆಯ ವಾರದಲ್ಲಿ ಸಮಾರೋಪ ನಡೆಯಲಿದೆ ಎಂದು ಅಮೃತ ಮಹೋತ್ಸವ ಸಮಿತಿ ಸಂಚಾಲಕ ವಿಜಯ ಸುವರ್ಣ ಗುರುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.