<p><strong>ಮಂಗಳೂರು</strong>: ಬಜ್ಪೆಯ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಭಾನುವಾರ ರಾತ್ರಿ ದುಬೈಗೆ ಹೊರಟಿದ್ದ ಪ್ರಯಾಣಿಕನೊಬ್ಬ ಅಕ್ರಮವಾಗಿ ಸಾಗಿಸುತ್ತಿದ್ದ 10,000 ಅಮೆರಿಕನ್ ಡಾಲರ್ ಕರೆನ್ಸಿಯನ್ನು ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯ (ಸಿಐಎಸ್ಎಫ್) ಸಿಬ್ಬಂದಿ ವಶಪಡಿಸಿಕೊಂಡಿದ್ದಾರೆ.</p>.<p>ಬೆಂಗಳೂರು ನಿವಾಸಿಯಾಗಿರುವ ಶಶಾಂಕ್ ಬೈಸಾನಿ ಗುಪ್ತ ಭಾನುವಾರ ತಡರಾತ್ರಿ ಸ್ಪೈಸ್ ಜೆಟ್ ವಿಮಾನದಲ್ಲಿ ದುಬೈಗೆ ಹೊರಟಿದ್ದರು. ರಾತ್ರಿ 12.10ಕ್ಕೆ ಪ್ರಯಾಣಿಕರ ತಪಾಸಣಾ ಘಟಕದಲ್ಲಿ ಅವರನ್ನು ತಪಾಸಣೆ ನಡೆಸಲಾಯಿತು. ಆಗ ಪ್ಯಾಂಟ್ ಜೇಬಿನಲ್ಲಿ ಅಡಗಿಸಿಟ್ಟಿದ್ದ 5,100 ಅಮೆರಿಕನ್ ಡಾಲರುಗಳಷ್ಟು ವಿದೇಶಿ ಕರೆನ್ಸಿ ಪತ್ತೆಯಾಯಿತು. ನಂತರ ಕೈಯಲ್ಲಿದ್ದ ಚೀಲವನ್ನೂ ತಪಸಾಣೆ ಮಾಡಲಾಯಿತು. ಅದರಲ್ಲಿ 4,900 ಅಮೆರಿಕನ್ ಡಾಲರ್ ವಿದೇಶಿ ಕರೆನ್ಸಿ ದೊರಕಿತು ಎಂದು ಸಿಐಎಸ್ಎಫ್ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ತಕ್ಷಣವೇ ಈ ಪ್ರಯಾಣಿಕನಿಗೆ ಪ್ರಯಾಣಕ್ಕೆ ಅನುಮತಿ ನಿರಾಕರಿಸಿ, ಆತನನ್ನು ವಶಕ್ಕೆ ಪಡೆಯಲಾಯಿತು. ನಂತರ ಆತನನ್ನು ಕಸ್ಟಮ್ಸ್ ಅಧಿಕಾರಿಗಳ ವಶಕ್ಕೆ ನೀಡಲಾಯಿತು. ವಿದೇಶಿ ಕರೆನ್ಸಿಯನ್ನು ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ಆರೋಪದ ಕುರಿತು ಕಸ್ಟಮ್ಸ್ ಅಧಿಕಾರಿಗಳು ಆತನ ವಿಚಾರಣೆ ನಡಸುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ಬಜ್ಪೆಯ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಭಾನುವಾರ ರಾತ್ರಿ ದುಬೈಗೆ ಹೊರಟಿದ್ದ ಪ್ರಯಾಣಿಕನೊಬ್ಬ ಅಕ್ರಮವಾಗಿ ಸಾಗಿಸುತ್ತಿದ್ದ 10,000 ಅಮೆರಿಕನ್ ಡಾಲರ್ ಕರೆನ್ಸಿಯನ್ನು ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯ (ಸಿಐಎಸ್ಎಫ್) ಸಿಬ್ಬಂದಿ ವಶಪಡಿಸಿಕೊಂಡಿದ್ದಾರೆ.</p>.<p>ಬೆಂಗಳೂರು ನಿವಾಸಿಯಾಗಿರುವ ಶಶಾಂಕ್ ಬೈಸಾನಿ ಗುಪ್ತ ಭಾನುವಾರ ತಡರಾತ್ರಿ ಸ್ಪೈಸ್ ಜೆಟ್ ವಿಮಾನದಲ್ಲಿ ದುಬೈಗೆ ಹೊರಟಿದ್ದರು. ರಾತ್ರಿ 12.10ಕ್ಕೆ ಪ್ರಯಾಣಿಕರ ತಪಾಸಣಾ ಘಟಕದಲ್ಲಿ ಅವರನ್ನು ತಪಾಸಣೆ ನಡೆಸಲಾಯಿತು. ಆಗ ಪ್ಯಾಂಟ್ ಜೇಬಿನಲ್ಲಿ ಅಡಗಿಸಿಟ್ಟಿದ್ದ 5,100 ಅಮೆರಿಕನ್ ಡಾಲರುಗಳಷ್ಟು ವಿದೇಶಿ ಕರೆನ್ಸಿ ಪತ್ತೆಯಾಯಿತು. ನಂತರ ಕೈಯಲ್ಲಿದ್ದ ಚೀಲವನ್ನೂ ತಪಸಾಣೆ ಮಾಡಲಾಯಿತು. ಅದರಲ್ಲಿ 4,900 ಅಮೆರಿಕನ್ ಡಾಲರ್ ವಿದೇಶಿ ಕರೆನ್ಸಿ ದೊರಕಿತು ಎಂದು ಸಿಐಎಸ್ಎಫ್ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ತಕ್ಷಣವೇ ಈ ಪ್ರಯಾಣಿಕನಿಗೆ ಪ್ರಯಾಣಕ್ಕೆ ಅನುಮತಿ ನಿರಾಕರಿಸಿ, ಆತನನ್ನು ವಶಕ್ಕೆ ಪಡೆಯಲಾಯಿತು. ನಂತರ ಆತನನ್ನು ಕಸ್ಟಮ್ಸ್ ಅಧಿಕಾರಿಗಳ ವಶಕ್ಕೆ ನೀಡಲಾಯಿತು. ವಿದೇಶಿ ಕರೆನ್ಸಿಯನ್ನು ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ಆರೋಪದ ಕುರಿತು ಕಸ್ಟಮ್ಸ್ ಅಧಿಕಾರಿಗಳು ಆತನ ವಿಚಾರಣೆ ನಡಸುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>