ಬಜಪೆ: ಕೆಲವು ದಿನಗಳಿಂದ ಗ್ರಾಮಸ್ಥರಲ್ಲಿ ಭೀತಿ ಹುಟ್ಟಿಸಿದ್ದ ಚಿರತೆ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಭಾನುವಾರ ಬಿದ್ದಿದೆ.
ಎಕ್ಕಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರಸುಲೆಪದವು ಎಂಬಲ್ಲಿ ಮನೆಯೊಂದರ ಬಳಿ ಅರಣ್ಯ ಇಲಾಖೆ ಬೋನು ಇರಿಸಿತ್ತು.
ಗ್ರಾಮದಲ್ಲಿ ಚಿರತೆಯ ಕಾಣಿಸಿಕೊಂಡಿದ್ದರಿಂದ ಗ್ರಾಮಸ್ಥರು ಭಯಗೊಂಡಿದ್ದರು. ಗ್ರಾಮಸ್ಥರಾದ ಯೋಗೀಶ್ ಎಂಬುವರ ಸಾಕು ನಾಯಿಯನ್ನು ಕೊಂದು ಹಾಕಿತ್ತು. ಯೋಗೀಶ್ ಅವರು ಅರಣ್ಯ ಇಲಾಖೆಗೆ ಈ ಸಂಬಂಧ ಮನವಿ ಮಾಡಿದ್ದರು.
ವಲಯ ಅರಣ್ಯಾಧಿಕಾರಿ ರಾಜೇಶ್, ಉಪವಲಯ ಅರಣ್ಯಾಧಿಕಾರಿ ವಿನಯ್ ಕುಮಾರ್, ಬೀಟ್ ಅರಣ್ಯ ರಕ್ಷಕ ರೋಹಿತ್, ಶಿವಪ್ರಸಾದ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.